ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆಯು ಡಿ.23 ರಂದು ಉಜಿರೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ರವರು ದೀಪ ಪ್ರಜ್ವಲನೆಗೊಳಿಸಿ, ಮಾತನಾಡಿ, ಇಲಾಖೆಯ ಎಲ್ಲಾ ಚಟುವಟಿಕೆಗಳಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರೋತ್ಸಾಹ ನೀಡುತ್ತ ಬರುತ್ತಿದ್ದಾರೆ. ಉತ್ತಮ ಶಿಕ್ಷಕ ಸಮುದಾಯದ ಅಡಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಅನೇಕ ವಿಚಾರಗಳನ್ನು ತಿಳಿದುಕೊಳ್ಳಬೇಕು. ಪುಸ್ತಕದ ಜ್ಞಾನದ ಜೊತೆಗೆ ಪ್ರಾಪಂಚಿಕ ಜ್ಞಾನವೂ ಬೇಕು. ವಾರ್ಷಿಕ ಪರೀಕ್ಷೆಗಳಿಗೆ ತಯಾರಾಗುವುದು ಅಗತ್ಯ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರ ಪಾತ್ರ ಮಹತ್ವವಾದದ್ದು ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ವೇದಿಕೆ ವಾರ್ಷಿಕ ಪ್ರತಿಭಾ ದಿನಾಚರಣೆ. ವೇದಿಕೆಯನ್ನು ಸದುಪಯೋಗ ಪಡಿಸಿಕೊಂಡರೆ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಗುರಿ ಇಟ್ಟುಕೊಂಡು ಶ್ರಮವಹಿಸಿ ಓದಬೇಕು ಎಂದರು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರಾದ ಆರ್ ಎನ್ ಪೂವಣಿ, ನಿಲಯ ಪಾಲಕರಾದ ಯತೀಶ್ ಕೆ ಬಳಂಜ, ಶಿಕ್ಷಕರಾದ ರವಿಚಂದ್ರ ಬಿ, ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಸುದ್ದಿ ಉದಯ ಪತ್ರಿಕೆಯ ವರದಿಗಾರ ಸುದಿತ್, ಶಿಕ್ಷಕ ವೃಂದದವರು, ವಿದ್ಯಾರ್ಥಿ ನಾಯಕರುಗಳು, ಪೋಷಕರು, ಅಕ್ಷರ ದಾಸೋಹದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರು ಸುರೇಶ್ ಪ್ರಸ್ತಾವಿಸಿ, ಸ್ವಾಗತಿಸಿದರು. ಶಿಕ್ಷಕಿ ತ್ರಿವೇಣಿ ನಿರೂಪಿಸಿದರು.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

Suddi Udaya

ಜನರ ಹಕ್ಕುಗಳನ್ನು ಖಾತ್ರಿ ಪಡಿಸದೆ ಭೌತಿಕ ಸರ್ವೆ ಮಾಡದೆ ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆ ಹೊರಡಿಸಿರುವುದು ಆತಂಕಕಾರಿ ಬೆಳವಣಿಗೆ: ಹರೀಶ್ ಎಳನೀರ್

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!