25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆಯು ಡಿ.23 ರಂದು ಉಜಿರೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ರವರು ದೀಪ ಪ್ರಜ್ವಲನೆಗೊಳಿಸಿ, ಮಾತನಾಡಿ, ಇಲಾಖೆಯ ಎಲ್ಲಾ ಚಟುವಟಿಕೆಗಳಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರೋತ್ಸಾಹ ನೀಡುತ್ತ ಬರುತ್ತಿದ್ದಾರೆ. ಉತ್ತಮ ಶಿಕ್ಷಕ ಸಮುದಾಯದ ಅಡಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಅನೇಕ ವಿಚಾರಗಳನ್ನು ತಿಳಿದುಕೊಳ್ಳಬೇಕು. ಪುಸ್ತಕದ ಜ್ಞಾನದ ಜೊತೆಗೆ ಪ್ರಾಪಂಚಿಕ ಜ್ಞಾನವೂ ಬೇಕು. ವಾರ್ಷಿಕ ಪರೀಕ್ಷೆಗಳಿಗೆ ತಯಾರಾಗುವುದು ಅಗತ್ಯ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರ ಪಾತ್ರ ಮಹತ್ವವಾದದ್ದು ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ವೇದಿಕೆ ವಾರ್ಷಿಕ ಪ್ರತಿಭಾ ದಿನಾಚರಣೆ. ವೇದಿಕೆಯನ್ನು ಸದುಪಯೋಗ ಪಡಿಸಿಕೊಂಡರೆ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಗುರಿ ಇಟ್ಟುಕೊಂಡು ಶ್ರಮವಹಿಸಿ ಓದಬೇಕು ಎಂದರು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರಾದ ಆರ್ ಎನ್ ಪೂವಣಿ, ನಿಲಯ ಪಾಲಕರಾದ ಯತೀಶ್ ಕೆ ಬಳಂಜ, ಶಿಕ್ಷಕರಾದ ರವಿಚಂದ್ರ ಬಿ, ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಸುದ್ದಿ ಉದಯ ಪತ್ರಿಕೆಯ ವರದಿಗಾರ ಸುದಿತ್, ಶಿಕ್ಷಕ ವೃಂದದವರು, ವಿದ್ಯಾರ್ಥಿ ನಾಯಕರುಗಳು, ಪೋಷಕರು, ಅಕ್ಷರ ದಾಸೋಹದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರು ಸುರೇಶ್ ಪ್ರಸ್ತಾವಿಸಿ, ಸ್ವಾಗತಿಸಿದರು. ಶಿಕ್ಷಕಿ ತ್ರಿವೇಣಿ ನಿರೂಪಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya

ಮಂಗಳೂರು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆಯಲ್ಲಿ ನೂತನ ಶಾಖೆ ಉದ್ಘಾಟನೆ

Suddi Udaya

ಬರೆಂಗಾಯ ಮಹಮ್ಮಾಯಿ-ದೈವರಾಜ ಗುಳಿಗ ದೈವದ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬಜ್ಪೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

Suddi Udaya
error: Content is protected !!