September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

ವೇಣೂರು: ಇಲ್ಲಿನ ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಇತ್ತೀಚೆಗೆ ಸಂಚಾಲಕರಾದ ವಂ|ಫಾ| ಪೀಟರ್ ಅರಾನ್ಹರವರ ಅಧ್ಯಕ್ಷತೆಯಲ್ಲಿ ಶಾಲಾ ವಠಾರದಲ್ಲಿ ಜರುಗಿತು.

ವಂ|ಫಾ| ಸೈಮನ್ ಪಿಂಟೊ ಪ್ರಾಂಶುಪಾಲರು ಹೋಲಿ ರೀಡಿಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾದ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ, ರಾಜೇಶ್, ಸಮೂಹ ಸಂಪನ್ಮೂಲ ವ್ಯಕ್ತಿ ಬಜಿರೆ, ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ದಯಾನಂದ ಪೂಜಾರಿ, ಉದ್ಯಮಿ ಭಾಸ್ಕರ್ ಪೈ, ಜಿನರಾಜ್ ಜೈನ್ ಮಾಲಕರು ಪದ್ಮಾಂಬ ಸಮೂಹ ಸಂಸ್ಥೆ ವೇಣೂರು, ಹೆಚ್ ಮಹಮ್ಮದ್ ನಿವೃತ್ತ ಮೆನೇಜರ್ ಸಿ ಎ ಬ್ಯಾಂಕ್ ವೇಣೂರು ಶುಭ ಹಾರೈಸಿದರು.

ಸಭೆಯಲ್ಲಿ ನಿವೃತ್ತ ಶಿಕ್ಷಕ ಎಲ್‌ .ಜೆ. ಫೆರ್ನಾಂಡಿಸ್ ಧ್ವಜಾರೋಹಣಗೈದರು. ದಿನೇಶ್ ಗೌಡ, ಉದ್ಯಮಿ ಲಾರೆನ್ಸ್ ಲೋಬೊ, ಪಿ. ಎಚ್ .ಅಶ್ರಫ್ ರವರು ಬಹುಮಾನ ವಿತರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಮಾರ್ಸೆಲಿನ್ ಲೀನಾ ಪಿರೇರಾ ಸ್ವಾಗತಿಸಿದರು. ಸಹ ಶಿಕ್ಷಕಿ ಮೀನಾ ಮೋನಿಸ್ ವರದಿ ವಾಚಿಸಿದರು.

ಅಧ್ಯಾಪಕರಾದ ಮರೆಪ್ಪ ತಳಕೇರಿ ಅತಿಥಿಗಳನ್ನು ಗೌರವಿಸಿದರು. ಸುಮಲತಾ, ಲೀಲಾವತಿ,ಸುಪ್ರಿತಾ. ಆರ್ ನಿರೂಪಿಸಿ, ರಸಿಕ, ಸುಪ್ರಿತಾ.ಎಸ್ ಧನ್ಯವಾದವಿತ್ತರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ನೃತ್ಯ ರೂಪಕಗಳಿಂದ ಕೂಡಿದ ಸಾಂಸ್ಕೃತಿಕ ಕಾರ್ಯಕ್ರಮವು ವಿಜೃಂಭಣೆಯಿಂದ ಜರಗಿತು.

Related posts

ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

Suddi Udaya

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

Suddi Udaya
error: Content is protected !!