25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಬೆಳ್ತಂಗಡಿ: ಗುರುವಾಯನಕೆರೆ, ಕಾರ್ಕಳ ಮೂಡುಬಿದ್ರೆ ಕೂಡು ರಸ್ತೆಯ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು 5 ಬಾರಿ ಪ್ರತಿನಿಧಿಸಿರುವ ಬಡವರವರ ಪರ ಹೋರಾಟ ಮಾಡಿದ ಭ್ರಷ್ಟಾಚಾರವನ್ನು ಕಠಿಣ ಶಬ್ದಗಳಲ್ಲಿ ವಿರೋಧಿಸುತ್ತಿದ್ದ ನೇರ ನಡೆನುಡಿಯ ನಾಯಕ ಕುವೆಟ್ಟು ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿರುವ ದಿ| ಕೆ ವಸಂತ ಬಂಗೇರವರ ಪುತ್ಥಳಿಯನ್ನು ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಕಾರ್ಕಳ ಮೂಡುಬಿದರೆ ಕೂಡು ರಸ್ತೆಯ ಶಕ್ತಿನಗರ ಸರ್ಕಲ್ ನಲ್ಲಿ ಸ್ಥಾಪನೆ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ರವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ತಾಲೂಕು ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಆಯುಬ್ ಡಿ.ಕೆ, ತಾಲೂಕು ಅಸಂಘಟಿತ ಕಾರ್ಮಿಕ ಸಮಿತಿಯ ಅಧ್ಯಕ್ಷ ಅಬ್ದುಲ್ ರಜಾಕ್, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಡಾ. ರಾಜಾರಾಮ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಲಂದರ್ ಕೊಕ್ಕಡ, ಧನಂಜಯ್ ರಾವ್ ಕುವೆಟ್ಟು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya
error: Content is protected !!