25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್” ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್ ಕಾರ್ಯಕ್ರಮವು ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್- ರೇಂಜರ್ಸ್ ಘಟಕ ಹಾಗೂ ಪ್ರಸನ್ನ ಆಯುರ್ವೇದ ಕಾಲೇಜ್ ಮತ್ತು ಆಸ್ಪತ್ರೆ ಇವರ ಸಹಯೋಗದೊಂದಿಗೆ ಡಿ.23 ರಂದು ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರ ವಾತ, ಪಿತ್ತ, ಕಫ ಇವುಗಳ ಪರೀಕ್ಷೆ ಮಾಡಿ, ಅದಕ್ಕೆ ಪೂರಕವಾಗಿ ಸೇವಿಸಬೇಕಾದ ಆಹಾರ ವ್ಯವಸ್ಥೆಯ ಬಗ್ಗೆ ಅಲ್ಲಿನ ವೈದ್ಯ ವೃಂದ ಸವಿವರವಾಗಿ ತಿಳಿಸಿದರು. ವೈದ್ಯರಾದ ಡಾ. ದೇವಾನಂದ್ ಅಭಿಯಾನದ ಮಹತ್ವ ಹಾಗೂ ನಮ್ಮ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ನಾವು ಯಾವ ರೀತಿಯ ಆಹಾರವನ್ನು ಸೇವಿಸಬೇಕು ಎಂಬುದರ ಬಗ್ಗೆ ಸವಿವರವಾಗಿ ತಿಳಿಸಿದರು.

ಡಾ. ವಿಷ್ಣು ಹಾಗೂ ಡಾ. ವೀಣಾ ರವರು ತಮ್ಮ ವೈದ್ಯ ವಿದ್ಯಾರ್ಥಿಗಳ ಜೊತೆಗೆ ಎಲ್ಲರ ಆರೋಗ್ಯ ತಪಾಸಣೆಯನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊಫೆಸರ್ ಪದ್ಮನಾಭ ಕೆ. ಇವರು ವಹಿಸಿದರು.

ವೇದಿಕೆಯಲ್ಲಿ ಯುವ ರೆಡ್ ಕ್ರಾಸ್ ಘಟಕದ ಸಂಯೋಜನಾಧಿಕಾರಿ ಡಾ. ರವಿ ಎಂ. ಎನ್. ಹಾಗೂ ಪ್ರೊಫೆಸರ್ ನವೀನ್ ಉಪಸ್ಥಿತರಿದ್ದರು. ದ್ವಿತೀಯ ಎಂಕಾಂನ ಕುಮಾರಿ ಅನನ್ಯ ಜೈನ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

Related posts

ಲಾಯಿಲ ಗ್ರಾಮದ ಕುಂಟಿನಿ ನಿವಾಸಿ ನಿತಿನ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya
error: Content is protected !!