24 C
ಪುತ್ತೂರು, ಬೆಳ್ತಂಗಡಿ
July 24, 2026
Uncategorized

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್” ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್ ಕಾರ್ಯಕ್ರಮವು ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್- ರೇಂಜರ್ಸ್ ಘಟಕ ಹಾಗೂ ಪ್ರಸನ್ನ ಆಯುರ್ವೇದ ಕಾಲೇಜ್ ಮತ್ತು ಆಸ್ಪತ್ರೆ ಇವರ ಸಹಯೋಗದೊಂದಿಗೆ ಡಿ.23 ರಂದು ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರ ವಾತ, ಪಿತ್ತ, ಕಫ ಇವುಗಳ ಪರೀಕ್ಷೆ ಮಾಡಿ, ಅದಕ್ಕೆ ಪೂರಕವಾಗಿ ಸೇವಿಸಬೇಕಾದ ಆಹಾರ ವ್ಯವಸ್ಥೆಯ ಬಗ್ಗೆ ಅಲ್ಲಿನ ವೈದ್ಯ ವೃಂದ ಸವಿವರವಾಗಿ ತಿಳಿಸಿದರು. ವೈದ್ಯರಾದ ಡಾ. ದೇವಾನಂದ್ ಅಭಿಯಾನದ ಮಹತ್ವ ಹಾಗೂ ನಮ್ಮ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ನಾವು ಯಾವ ರೀತಿಯ ಆಹಾರವನ್ನು ಸೇವಿಸಬೇಕು ಎಂಬುದರ ಬಗ್ಗೆ ಸವಿವರವಾಗಿ ತಿಳಿಸಿದರು.

ಡಾ. ವಿಷ್ಣು ಹಾಗೂ ಡಾ. ವೀಣಾ ರವರು ತಮ್ಮ ವೈದ್ಯ ವಿದ್ಯಾರ್ಥಿಗಳ ಜೊತೆಗೆ ಎಲ್ಲರ ಆರೋಗ್ಯ ತಪಾಸಣೆಯನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊಫೆಸರ್ ಪದ್ಮನಾಭ ಕೆ. ಇವರು ವಹಿಸಿದರು.

ವೇದಿಕೆಯಲ್ಲಿ ಯುವ ರೆಡ್ ಕ್ರಾಸ್ ಘಟಕದ ಸಂಯೋಜನಾಧಿಕಾರಿ ಡಾ. ರವಿ ಎಂ. ಎನ್. ಹಾಗೂ ಪ್ರೊಫೆಸರ್ ನವೀನ್ ಉಪಸ್ಥಿತರಿದ್ದರು. ದ್ವಿತೀಯ ಎಂಕಾಂನ ಕುಮಾರಿ ಅನನ್ಯ ಜೈನ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

Related posts

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಅಣಬೆ ಕೃಷಿ ತರಬೇತಿ

Suddi Udaya

ದ ಕ ಜಿಲ್ಲಾ ಗೊಲ್ಲ (ಯಾದವ )ಸಂಘ ಬೆಳ್ತಂಗಡಿ ವಲಯದ ವತಿಯಿಂದ ಮನಿಷಾರಿಗೆ ಸನ್ಮಾನ

Suddi Udaya

ತೋಟತ್ತಾಡಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!