23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಅಂತಾರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.

ವಿಶೇಷ ವಿಜ್ಞಾನ ಪ್ರಯೋಗದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಯಕ್ರಮದ ಮುಖ್ಯ ಅತಿಥಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್ “ವಿದ್ಯಾರ್ಥಿಗಳು ತಮ್ಮ ದೈನಂದಿನ ಜೀವನದಲ್ಲಿ ವಿಜ್ಞಾನವನ್ನು ಅಳವಡಿಸಿಕೊಂಡು ಹೊಸ ಆವಿಷ್ಕಾರಗಳನ್ನು ಮಾಡುತ್ತಾ ಭವಿಷ್ಯದಲ್ಲಿ ಉತ್ತಮ ವಿಜ್ಞಾನಿಗಳಾಗಿ ದೇಶ ಸೇವೆಯನ್ನು ಮಾಡಬೇಕು ಮತ್ತು ಅದಕ್ಕೆ ಬೇಕಾದ ಸಂಪೂರ್ಣ ಸಹಕಾರವನ್ನು ನೀಡುವ ಭರವಸೆಯನ್ನು ನೀಡಲಾಗುವುದು ” ಎಂದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ರಾಷ್ಟ್ರೀಯ ಗಣಿತ ದಿನಾಚರಣೆಯ ಮಹತ್ವವನ್ನು ವಿಶೇಷ ವಿವರಣೆಯೊಂದಿಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಹತ್ತನೆ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಶಿಹಾಬುದ್ದಿನ್ ಕಾರ್ಯಕ್ರಮವನ್ನು ನಿರೂಪಿಸಿದರು. 8ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಜಾಫರ್ ಅತಿಥಿಗಳನ್ನು ಸ್ವಾಗತಿಸಿದರು. 8ನೇ ತರಗತಿಯ ವಿದ್ಯಾರ್ಥಿ ಮುನಾವರ್ ಧನ್ಯವಾದವಿತ್ತರು. ವಿದ್ಯಾರ್ಥಿಗಳು ತಯಾರಿಸಿದ ಬೇರೆ ಬೇರೆ ವಿಜ್ಞಾನದ ಮಾದರಿಗಳ ವಸ್ತುಪ್ರದರ್ಶನ ಅತಿಥಿಗಳ ಪ್ರಶಂಷೆಗೆ ಕಾರಣವಾಯಿತು.

Related posts

ಜಿಲ್ಲಾ ಮಟ್ಟದ ಪ್ರಶಸ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ ರವಿಕುಮಾರ್ ವಿತರಿಸಿದರು.

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕರುಣಾಕರ ಬಂಗೇರ ಹಾಗೂ ಸಾಯಿರಾಂ ಅಂಬುಲೆನ್ಸ್ ಮಾಲಕ ಪವನ್ ಬಂಗೇರ

Suddi Udaya

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!