April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆಯು ಡಿ.23 ರಂದು ಉಜಿರೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ರವರು ದೀಪ ಪ್ರಜ್ವಲನೆಗೊಳಿಸಿ, ಮಾತನಾಡಿ, ಇಲಾಖೆಯ ಎಲ್ಲಾ ಚಟುವಟಿಕೆಗಳಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರೋತ್ಸಾಹ ನೀಡುತ್ತ ಬರುತ್ತಿದ್ದಾರೆ. ಉತ್ತಮ ಶಿಕ್ಷಕ ಸಮುದಾಯದ ಅಡಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಅನೇಕ ವಿಚಾರಗಳನ್ನು ತಿಳಿದುಕೊಳ್ಳಬೇಕು. ಪುಸ್ತಕದ ಜ್ಞಾನದ ಜೊತೆಗೆ ಪ್ರಾಪಂಚಿಕ ಜ್ಞಾನವೂ ಬೇಕು. ವಾರ್ಷಿಕ ಪರೀಕ್ಷೆಗಳಿಗೆ ತಯಾರಾಗುವುದು ಅಗತ್ಯ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರ ಪಾತ್ರ ಮಹತ್ವವಾದದ್ದು ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ವೇದಿಕೆ ವಾರ್ಷಿಕ ಪ್ರತಿಭಾ ದಿನಾಚರಣೆ. ವೇದಿಕೆಯನ್ನು ಸದುಪಯೋಗ ಪಡಿಸಿಕೊಂಡರೆ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಗುರಿ ಇಟ್ಟುಕೊಂಡು ಶ್ರಮವಹಿಸಿ ಓದಬೇಕು ಎಂದರು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರಾದ ಆರ್ ಎನ್ ಪೂವಣಿ, ನಿಲಯ ಪಾಲಕರಾದ ಯತೀಶ್ ಕೆ ಬಳಂಜ, ಶಿಕ್ಷಕರಾದ ರವಿಚಂದ್ರ ಬಿ, ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಸುದ್ದಿ ಉದಯ ಪತ್ರಿಕೆಯ ವರದಿಗಾರ ಸುದಿತ್, ಶಿಕ್ಷಕ ವೃಂದದವರು, ವಿದ್ಯಾರ್ಥಿ ನಾಯಕರುಗಳು, ಪೋಷಕರು, ಅಕ್ಷರ ದಾಸೋಹದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರು ಸುರೇಶ್ ಪ್ರಸ್ತಾವಿಸಿ, ಸ್ವಾಗತಿಸಿದರು. ಶಿಕ್ಷಕಿ ತ್ರಿವೇಣಿ ನಿರೂಪಿಸಿದರು.

Related posts

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya
error: Content is protected !!