24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆಯು ಡಿ.23 ರಂದು ಉಜಿರೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ರವರು ದೀಪ ಪ್ರಜ್ವಲನೆಗೊಳಿಸಿ, ಮಾತನಾಡಿ, ಇಲಾಖೆಯ ಎಲ್ಲಾ ಚಟುವಟಿಕೆಗಳಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರೋತ್ಸಾಹ ನೀಡುತ್ತ ಬರುತ್ತಿದ್ದಾರೆ. ಉತ್ತಮ ಶಿಕ್ಷಕ ಸಮುದಾಯದ ಅಡಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಅನೇಕ ವಿಚಾರಗಳನ್ನು ತಿಳಿದುಕೊಳ್ಳಬೇಕು. ಪುಸ್ತಕದ ಜ್ಞಾನದ ಜೊತೆಗೆ ಪ್ರಾಪಂಚಿಕ ಜ್ಞಾನವೂ ಬೇಕು. ವಾರ್ಷಿಕ ಪರೀಕ್ಷೆಗಳಿಗೆ ತಯಾರಾಗುವುದು ಅಗತ್ಯ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರ ಪಾತ್ರ ಮಹತ್ವವಾದದ್ದು ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ವೇದಿಕೆ ವಾರ್ಷಿಕ ಪ್ರತಿಭಾ ದಿನಾಚರಣೆ. ವೇದಿಕೆಯನ್ನು ಸದುಪಯೋಗ ಪಡಿಸಿಕೊಂಡರೆ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಗುರಿ ಇಟ್ಟುಕೊಂಡು ಶ್ರಮವಹಿಸಿ ಓದಬೇಕು ಎಂದರು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರಾದ ಆರ್ ಎನ್ ಪೂವಣಿ, ನಿಲಯ ಪಾಲಕರಾದ ಯತೀಶ್ ಕೆ ಬಳಂಜ, ಶಿಕ್ಷಕರಾದ ರವಿಚಂದ್ರ ಬಿ, ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಸುದ್ದಿ ಉದಯ ಪತ್ರಿಕೆಯ ವರದಿಗಾರ ಸುದಿತ್, ಶಿಕ್ಷಕ ವೃಂದದವರು, ವಿದ್ಯಾರ್ಥಿ ನಾಯಕರುಗಳು, ಪೋಷಕರು, ಅಕ್ಷರ ದಾಸೋಹದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರು ಸುರೇಶ್ ಪ್ರಸ್ತಾವಿಸಿ, ಸ್ವಾಗತಿಸಿದರು. ಶಿಕ್ಷಕಿ ತ್ರಿವೇಣಿ ನಿರೂಪಿಸಿದರು.

Related posts

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya

ವಲಯ ಮಟ್ಟದ ಶಾಲೆ ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!