25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆಯು ಡಿ.23 ರಂದು ಉಜಿರೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ರವರು ದೀಪ ಪ್ರಜ್ವಲನೆಗೊಳಿಸಿ, ಮಾತನಾಡಿ, ಇಲಾಖೆಯ ಎಲ್ಲಾ ಚಟುವಟಿಕೆಗಳಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರೋತ್ಸಾಹ ನೀಡುತ್ತ ಬರುತ್ತಿದ್ದಾರೆ. ಉತ್ತಮ ಶಿಕ್ಷಕ ಸಮುದಾಯದ ಅಡಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಅನೇಕ ವಿಚಾರಗಳನ್ನು ತಿಳಿದುಕೊಳ್ಳಬೇಕು. ಪುಸ್ತಕದ ಜ್ಞಾನದ ಜೊತೆಗೆ ಪ್ರಾಪಂಚಿಕ ಜ್ಞಾನವೂ ಬೇಕು. ವಾರ್ಷಿಕ ಪರೀಕ್ಷೆಗಳಿಗೆ ತಯಾರಾಗುವುದು ಅಗತ್ಯ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರ ಪಾತ್ರ ಮಹತ್ವವಾದದ್ದು ಎಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ವೇದಿಕೆ ವಾರ್ಷಿಕ ಪ್ರತಿಭಾ ದಿನಾಚರಣೆ. ವೇದಿಕೆಯನ್ನು ಸದುಪಯೋಗ ಪಡಿಸಿಕೊಂಡರೆ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಗುರಿ ಇಟ್ಟುಕೊಂಡು ಶ್ರಮವಹಿಸಿ ಓದಬೇಕು ಎಂದರು.

ಈ ಸಂದರ್ಭದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯರಾದ ಆರ್ ಎನ್ ಪೂವಣಿ, ನಿಲಯ ಪಾಲಕರಾದ ಯತೀಶ್ ಕೆ ಬಳಂಜ, ಶಿಕ್ಷಕರಾದ ರವಿಚಂದ್ರ ಬಿ, ಶಾಲಾ ಹಿರಿಯ ವಿದ್ಯಾರ್ಥಿ ಹಾಗೂ ಸುದ್ದಿ ಉದಯ ಪತ್ರಿಕೆಯ ವರದಿಗಾರ ಸುದಿತ್, ಶಿಕ್ಷಕ ವೃಂದದವರು, ವಿದ್ಯಾರ್ಥಿ ನಾಯಕರುಗಳು, ಪೋಷಕರು, ಅಕ್ಷರ ದಾಸೋಹದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರು ಸುರೇಶ್ ಪ್ರಸ್ತಾವಿಸಿ, ಸ್ವಾಗತಿಸಿದರು. ಶಿಕ್ಷಕಿ ತ್ರಿವೇಣಿ ನಿರೂಪಿಸಿದರು.

Related posts

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ಕಳೆಂಜ : ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕಾಯರ್ತಡ್ಕ ಕುಲಾಡಿ ಸಂಪರ್ಕ ರಸ್ತೆಯ ಕಾಂಕ್ರಿಟೀಕರಣ ಕಾಮಗಾರಿ ಪೂರ್ಣ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya

ಜ. 24- ಫೆ. 2 ರವರಿಗೆ ಕಾಜೂರು ಉರೂಸ್ ಮಹಾ ಸಂಭ್ರಮ : ಜ. 30 ಬ್ರಹತ್ ಝಿಕ್ರ್ ಮಜ್ಲಿಸ್ ಹಾಗೂ ಮುಸಾಫಿರ್ ಖಾನ ಕಟ್ಟಡ ಉದ್ಘಾಟನೆ; ಫೆ. 2 ಉರೂಸ್ ಸಮಾರೋಪ- ಮಹಾ ಅನ್ನದಾನ

Suddi Udaya

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya
error: Content is protected !!