22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

ವೇಣೂರು: ಇಲ್ಲಿನ ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಇತ್ತೀಚೆಗೆ ಸಂಚಾಲಕರಾದ ವಂ|ಫಾ| ಪೀಟರ್ ಅರಾನ್ಹರವರ ಅಧ್ಯಕ್ಷತೆಯಲ್ಲಿ ಶಾಲಾ ವಠಾರದಲ್ಲಿ ಜರುಗಿತು.

ವಂ|ಫಾ| ಸೈಮನ್ ಪಿಂಟೊ ಪ್ರಾಂಶುಪಾಲರು ಹೋಲಿ ರೀಡಿಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾದ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ, ರಾಜೇಶ್, ಸಮೂಹ ಸಂಪನ್ಮೂಲ ವ್ಯಕ್ತಿ ಬಜಿರೆ, ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ದಯಾನಂದ ಪೂಜಾರಿ, ಉದ್ಯಮಿ ಭಾಸ್ಕರ್ ಪೈ, ಜಿನರಾಜ್ ಜೈನ್ ಮಾಲಕರು ಪದ್ಮಾಂಬ ಸಮೂಹ ಸಂಸ್ಥೆ ವೇಣೂರು, ಹೆಚ್ ಮಹಮ್ಮದ್ ನಿವೃತ್ತ ಮೆನೇಜರ್ ಸಿ ಎ ಬ್ಯಾಂಕ್ ವೇಣೂರು ಶುಭ ಹಾರೈಸಿದರು.

ಸಭೆಯಲ್ಲಿ ನಿವೃತ್ತ ಶಿಕ್ಷಕ ಎಲ್‌ .ಜೆ. ಫೆರ್ನಾಂಡಿಸ್ ಧ್ವಜಾರೋಹಣಗೈದರು. ದಿನೇಶ್ ಗೌಡ, ಉದ್ಯಮಿ ಲಾರೆನ್ಸ್ ಲೋಬೊ, ಪಿ. ಎಚ್ .ಅಶ್ರಫ್ ರವರು ಬಹುಮಾನ ವಿತರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಮಾರ್ಸೆಲಿನ್ ಲೀನಾ ಪಿರೇರಾ ಸ್ವಾಗತಿಸಿದರು. ಸಹ ಶಿಕ್ಷಕಿ ಮೀನಾ ಮೋನಿಸ್ ವರದಿ ವಾಚಿಸಿದರು.

ಅಧ್ಯಾಪಕರಾದ ಮರೆಪ್ಪ ತಳಕೇರಿ ಅತಿಥಿಗಳನ್ನು ಗೌರವಿಸಿದರು. ಸುಮಲತಾ, ಲೀಲಾವತಿ,ಸುಪ್ರಿತಾ. ಆರ್ ನಿರೂಪಿಸಿ, ರಸಿಕ, ಸುಪ್ರಿತಾ.ಎಸ್ ಧನ್ಯವಾದವಿತ್ತರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ನೃತ್ಯ ರೂಪಕಗಳಿಂದ ಕೂಡಿದ ಸಾಂಸ್ಕೃತಿಕ ಕಾರ್ಯಕ್ರಮವು ವಿಜೃಂಭಣೆಯಿಂದ ಜರಗಿತು.

Related posts

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಎಸ್ ಕೆ ಎಸ್ ಎಸ್‌ ಎಫ್ ಮದ್ದಡ್ಕ ಶಾಖೆಯ ವತಿಯಿಂದ ಕುವೆಟ್ಟು ಶಾಲಾ ವಿದ್ಯಾರ್ಥಿಗಳಿಗೆ ಟೈ ಮತ್ತು ಬೆಲ್ಟ್ ವಿತರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!