24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

ವೇಣೂರು: ಇಲ್ಲಿನ ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಇತ್ತೀಚೆಗೆ ಸಂಚಾಲಕರಾದ ವಂ|ಫಾ| ಪೀಟರ್ ಅರಾನ್ಹರವರ ಅಧ್ಯಕ್ಷತೆಯಲ್ಲಿ ಶಾಲಾ ವಠಾರದಲ್ಲಿ ಜರುಗಿತು.

ವಂ|ಫಾ| ಸೈಮನ್ ಪಿಂಟೊ ಪ್ರಾಂಶುಪಾಲರು ಹೋಲಿ ರೀಡಿಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾದ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ, ರಾಜೇಶ್, ಸಮೂಹ ಸಂಪನ್ಮೂಲ ವ್ಯಕ್ತಿ ಬಜಿರೆ, ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ದಯಾನಂದ ಪೂಜಾರಿ, ಉದ್ಯಮಿ ಭಾಸ್ಕರ್ ಪೈ, ಜಿನರಾಜ್ ಜೈನ್ ಮಾಲಕರು ಪದ್ಮಾಂಬ ಸಮೂಹ ಸಂಸ್ಥೆ ವೇಣೂರು, ಹೆಚ್ ಮಹಮ್ಮದ್ ನಿವೃತ್ತ ಮೆನೇಜರ್ ಸಿ ಎ ಬ್ಯಾಂಕ್ ವೇಣೂರು ಶುಭ ಹಾರೈಸಿದರು.

ಸಭೆಯಲ್ಲಿ ನಿವೃತ್ತ ಶಿಕ್ಷಕ ಎಲ್‌ .ಜೆ. ಫೆರ್ನಾಂಡಿಸ್ ಧ್ವಜಾರೋಹಣಗೈದರು. ದಿನೇಶ್ ಗೌಡ, ಉದ್ಯಮಿ ಲಾರೆನ್ಸ್ ಲೋಬೊ, ಪಿ. ಎಚ್ .ಅಶ್ರಫ್ ರವರು ಬಹುಮಾನ ವಿತರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಮಾರ್ಸೆಲಿನ್ ಲೀನಾ ಪಿರೇರಾ ಸ್ವಾಗತಿಸಿದರು. ಸಹ ಶಿಕ್ಷಕಿ ಮೀನಾ ಮೋನಿಸ್ ವರದಿ ವಾಚಿಸಿದರು.

ಅಧ್ಯಾಪಕರಾದ ಮರೆಪ್ಪ ತಳಕೇರಿ ಅತಿಥಿಗಳನ್ನು ಗೌರವಿಸಿದರು. ಸುಮಲತಾ, ಲೀಲಾವತಿ,ಸುಪ್ರಿತಾ. ಆರ್ ನಿರೂಪಿಸಿ, ರಸಿಕ, ಸುಪ್ರಿತಾ.ಎಸ್ ಧನ್ಯವಾದವಿತ್ತರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ನೃತ್ಯ ರೂಪಕಗಳಿಂದ ಕೂಡಿದ ಸಾಂಸ್ಕೃತಿಕ ಕಾರ್ಯಕ್ರಮವು ವಿಜೃಂಭಣೆಯಿಂದ ಜರಗಿತು.

Related posts

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya
error: Content is protected !!