22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

ವೇಣೂರು: ಇಲ್ಲಿನ ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಇತ್ತೀಚೆಗೆ ಸಂಚಾಲಕರಾದ ವಂ|ಫಾ| ಪೀಟರ್ ಅರಾನ್ಹರವರ ಅಧ್ಯಕ್ಷತೆಯಲ್ಲಿ ಶಾಲಾ ವಠಾರದಲ್ಲಿ ಜರುಗಿತು.

ವಂ|ಫಾ| ಸೈಮನ್ ಪಿಂಟೊ ಪ್ರಾಂಶುಪಾಲರು ಹೋಲಿ ರೀಡಿಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾದ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ, ರಾಜೇಶ್, ಸಮೂಹ ಸಂಪನ್ಮೂಲ ವ್ಯಕ್ತಿ ಬಜಿರೆ, ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ದಯಾನಂದ ಪೂಜಾರಿ, ಉದ್ಯಮಿ ಭಾಸ್ಕರ್ ಪೈ, ಜಿನರಾಜ್ ಜೈನ್ ಮಾಲಕರು ಪದ್ಮಾಂಬ ಸಮೂಹ ಸಂಸ್ಥೆ ವೇಣೂರು, ಹೆಚ್ ಮಹಮ್ಮದ್ ನಿವೃತ್ತ ಮೆನೇಜರ್ ಸಿ ಎ ಬ್ಯಾಂಕ್ ವೇಣೂರು ಶುಭ ಹಾರೈಸಿದರು.

ಸಭೆಯಲ್ಲಿ ನಿವೃತ್ತ ಶಿಕ್ಷಕ ಎಲ್‌ .ಜೆ. ಫೆರ್ನಾಂಡಿಸ್ ಧ್ವಜಾರೋಹಣಗೈದರು. ದಿನೇಶ್ ಗೌಡ, ಉದ್ಯಮಿ ಲಾರೆನ್ಸ್ ಲೋಬೊ, ಪಿ. ಎಚ್ .ಅಶ್ರಫ್ ರವರು ಬಹುಮಾನ ವಿತರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಮಾರ್ಸೆಲಿನ್ ಲೀನಾ ಪಿರೇರಾ ಸ್ವಾಗತಿಸಿದರು. ಸಹ ಶಿಕ್ಷಕಿ ಮೀನಾ ಮೋನಿಸ್ ವರದಿ ವಾಚಿಸಿದರು.

ಅಧ್ಯಾಪಕರಾದ ಮರೆಪ್ಪ ತಳಕೇರಿ ಅತಿಥಿಗಳನ್ನು ಗೌರವಿಸಿದರು. ಸುಮಲತಾ, ಲೀಲಾವತಿ,ಸುಪ್ರಿತಾ. ಆರ್ ನಿರೂಪಿಸಿ, ರಸಿಕ, ಸುಪ್ರಿತಾ.ಎಸ್ ಧನ್ಯವಾದವಿತ್ತರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ನೃತ್ಯ ರೂಪಕಗಳಿಂದ ಕೂಡಿದ ಸಾಂಸ್ಕೃತಿಕ ಕಾರ್ಯಕ್ರಮವು ವಿಜೃಂಭಣೆಯಿಂದ ಜರಗಿತು.

Related posts

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya

ರೂ.1.00 ಕೋಟಿ ವೆಚ್ಚದಲ್ಲಿ ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ:ಬೇಡಿಕೆಗೆ ಸ್ಪಂದಿಸಿದ ಶಾಸಕರಿಗೆ ಅಭಿನಂದಿಸಿದ ಗ್ರಾಮಸ್ಥರು

Suddi Udaya

ಪ್ರದೀಶ್ ಮಾರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya
error: Content is protected !!