ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

ಕುಕ್ಕೇಡಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೇಡಿಯಲ್ಲಿ ಶಾಲಾ ವಾರ್ಷಿಕೋತ್ಸವದ 70ರ ಸಂಭ್ರಮವು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಧ್ವಜಾರೋಹಣವನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣಪ್ಪ ಉಜ್ಜಲ್ ನೆರವೇರಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಹಿರಿಯ ವಿದ್ಯಾರ್ಥಿ ವಸಂತ ಪೇರ್ಡೆ ಉದ್ಘಾಟಿಸಿದರು. ನಂತರ ಅಂಗನವಾಡಿ ವಿದ್ಯಾರ್ಥಿಗಳಿಗೆ, ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಹಳೆ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು .ಶಾಲಾ ಮಾಜಿ ಎಸ್‌.ಡಿ.ಎಂ.ಸಿ ಸದಸ್ಯರಿಗೆ ಗೌರವಾರ್ಪಣೆ, ಶಾಲಾ‌ ಹಳೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕುಮಾರಿ ಚೈತನ್ಯ ಅವರನ್ನು ಅಭಿನಂದಿಸಲಾಯಿತು. ಹಾಗೂ ಶಾಲಾ ವಾರ್ಷಿಕೋತ್ಸವದ ಪ್ರಯೋಜಕರಾದ ದಿನೇಶ್ ಬಾಳಿಗಾ ಪುಂಜಾಲಕಟ್ಟೆ, ಜಾರಪ್ಪ ಪೂಜಾರಿ ಬುಳೆಕ್ಕಾರ ಪಾದೆ, ಸುಧೀರ್ ಎಸ್ ಶ್ರಾವಣಿ ಎಂಟರ್ಪ್ರೈಸಸ್ ಪುಂಜಾಲಕಟ್ಟೆ, ಇವರನ್ನು ಸನ್ಮಾನಿಸಲಾಯಿತು.

ಸಭಾಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ.ಕೆ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಜೆಯ ಕಾರ್ಯಕ್ರಮ ದಲ್ಲಿ ಶಾಲಾ ವಿದ್ಯಾರ್ಥಿಗಳಿಂದ , ಹಳೆ ವಿದ್ಯಾರ್ಥಿಗಳಿಂದ,ಹಾಗೂ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ವೈಭವ ನಡೆಯಿತು. ವಿದ್ಯಾರ್ಥಿಗಳಿಂದ ಪೌರಣಿಕ ನಾಟಕ ಸತ್ಯವಾನ್ ಸಾವಿತ್ರಿ ಹಾಗೂ ಶಾಲೆಯ ಸ್ವರ್ಗ ನಾಟಕ ಪ್ರದರ್ಶನ ನಡೆಯಿತು. ಸ್ಥಳೀಯರು ಮತ್ತು ಹಳೆ ವಿದ್ಯಾರ್ಥಿಗಳಿಂದ ನಿಧಿಶ್ ಕುಮಾರ್ ಶೆಟ್ಟಿ ರಚನೆ ಮತ್ತು ನಿರ್ದೇಶನಾದ ಜೋಕ್ಲಾಟಿಕೆ ಬುಡ್ಲೆ ಎನ್ನುವ ಸುಂದರ ನಗೆ ನಾಟಕ ಪ್ರದರ್ಶನಗೊಂಡಿತು.

Related posts

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ಭೂ ಸೇನೆಯಿಂದ ನಿವೃತ್ತಿಗೊಂಡ ಪದ್ಮುಂಜ ಗಣೇಶ್ ಶೆಟ್ಟಿ ರವರಿಗೆ ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ವತಿಯಿಂದ ಸನ್ಮಾನ

Suddi Udaya

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya
error: Content is protected !!