22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

ಕುಕ್ಕೇಡಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೇಡಿಯಲ್ಲಿ ಶಾಲಾ ವಾರ್ಷಿಕೋತ್ಸವದ 70ರ ಸಂಭ್ರಮವು ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಧ್ವಜಾರೋಹಣವನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣಪ್ಪ ಉಜ್ಜಲ್ ನೆರವೇರಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಹಿರಿಯ ವಿದ್ಯಾರ್ಥಿ ವಸಂತ ಪೇರ್ಡೆ ಉದ್ಘಾಟಿಸಿದರು. ನಂತರ ಅಂಗನವಾಡಿ ವಿದ್ಯಾರ್ಥಿಗಳಿಗೆ, ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಹಳೆ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು .ಶಾಲಾ ಮಾಜಿ ಎಸ್‌.ಡಿ.ಎಂ.ಸಿ ಸದಸ್ಯರಿಗೆ ಗೌರವಾರ್ಪಣೆ, ಶಾಲಾ‌ ಹಳೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕುಮಾರಿ ಚೈತನ್ಯ ಅವರನ್ನು ಅಭಿನಂದಿಸಲಾಯಿತು. ಹಾಗೂ ಶಾಲಾ ವಾರ್ಷಿಕೋತ್ಸವದ ಪ್ರಯೋಜಕರಾದ ದಿನೇಶ್ ಬಾಳಿಗಾ ಪುಂಜಾಲಕಟ್ಟೆ, ಜಾರಪ್ಪ ಪೂಜಾರಿ ಬುಳೆಕ್ಕಾರ ಪಾದೆ, ಸುಧೀರ್ ಎಸ್ ಶ್ರಾವಣಿ ಎಂಟರ್ಪ್ರೈಸಸ್ ಪುಂಜಾಲಕಟ್ಟೆ, ಇವರನ್ನು ಸನ್ಮಾನಿಸಲಾಯಿತು.

ಸಭಾಕಾರ್ಯಕ್ರಮವು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ.ಕೆ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಜೆಯ ಕಾರ್ಯಕ್ರಮ ದಲ್ಲಿ ಶಾಲಾ ವಿದ್ಯಾರ್ಥಿಗಳಿಂದ , ಹಳೆ ವಿದ್ಯಾರ್ಥಿಗಳಿಂದ,ಹಾಗೂ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ವೈಭವ ನಡೆಯಿತು. ವಿದ್ಯಾರ್ಥಿಗಳಿಂದ ಪೌರಣಿಕ ನಾಟಕ ಸತ್ಯವಾನ್ ಸಾವಿತ್ರಿ ಹಾಗೂ ಶಾಲೆಯ ಸ್ವರ್ಗ ನಾಟಕ ಪ್ರದರ್ಶನ ನಡೆಯಿತು. ಸ್ಥಳೀಯರು ಮತ್ತು ಹಳೆ ವಿದ್ಯಾರ್ಥಿಗಳಿಂದ ನಿಧಿಶ್ ಕುಮಾರ್ ಶೆಟ್ಟಿ ರಚನೆ ಮತ್ತು ನಿರ್ದೇಶನಾದ ಜೋಕ್ಲಾಟಿಕೆ ಬುಡ್ಲೆ ಎನ್ನುವ ಸುಂದರ ನಗೆ ನಾಟಕ ಪ್ರದರ್ಶನಗೊಂಡಿತು.

Related posts

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಶ್ರಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!