September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ, ಮತ್ತು ಸಚಿವೆ ವಿರುದ್ಧ ಸಿ.ಟಿ ರವಿ ನೀಡಿದ ಹೇಳಿಕೆ ವಿರೋಧಿಸಿ
ಪ್ರತಿಭಟನೆ ಡಿ.23ರಂದು ಬೆಳ್ತಂಗಡಿ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಜರುಗಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ, ಮಹಿಳಾ ಕಾಂಗ್ರೆಸ್ ಮುಖಂಡೆ ಲೋಕೇಶ್ವರಿ ವಿನಯಚಂದ್ರ ಮಾತನಾಡಿ ಇಬ್ಬರ ನಿಂದನಾತ್ಮಕ ಹೇಳಿಕೆಯನ್ನು ಖಂಡಿಸಿದರು.


ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ , ಪ್ರವೀಣ್ ಫೆರ್ನಾಂಡಿಸ್ , ಜಯವಿಕ್ರಮ ಕಲ್ಲಾಪು, ಈಶ್ವರ ಭಟ್, ಕೇಶವ ಗೌಡ ಬೆಳಾಲು, ಪ್ರಮೋದ್ ಮಚ್ಚಿನ, ಅಬ್ದುಲ್ ರಜಾಕ್ ತೆಕ್ಕಾರು, ಇಸುಬು ಇಳಂತಿಲ, ಅಬ್ದುಲ್ ರಹಿಮಾನ್ ಪಡ್ಪು, ಮಹಿಳಾ ಕಾಂಗ್ರೇಸ್ ಘಟಕ ಗ್ರಾಮೀಣ ಸಮಿತಿ ಅಧ್ಯಕ್ಷೆ ಶ್ರೀಮತಿ ನಮಿತಾ ಕೆ. ಪೂಜಾರಿ, ಮಹಿಳಾ ನಗರ ಕಾಂಗ್ರೆಸ್ ಅಧ್ಯಕ್ಷ ವಂದನಾ ಭಂಡಾರಿ, ಬೆಳ್ತಂಗಡಿ ನಗರ ಪಂಚಾಯತ್ ಸದಸ್ಯ ಜಗದೀಶ್ ಡಿ, ಎಸ್ ಸಿ ಘಟಕದ ಅಧ್ಯಕ್ಷ ನೇಮಿರಾಜ್ ಕಿಲ್ಲೂರು, ವಿಜಯ ಕುಮಾರ್ ಬಜಿರೆ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್, ಆಶ್ರಫ್ ನೆರಿಯ, ಹನೀಫ್ ಲಾಯಿಲ, ದೇಜಪ್ಪ ಶೆಟ್ಟಿ ಪ್ರಭಾಕರ ಹೆಗ್ಡೆ ಅಟ್ಲಾಜೆ ಮೊದಲಾದವರು ಉಪಸ್ಥಿತರಿದ್ದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೇಡಿ ಸ್ವಾಗತಿಸಿದರು., ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ವಂದಿಸಿದರು.

Related posts

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya
error: Content is protected !!