25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್” ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್ ಕಾರ್ಯಕ್ರಮವು ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್- ರೇಂಜರ್ಸ್ ಘಟಕ ಹಾಗೂ ಪ್ರಸನ್ನ ಆಯುರ್ವೇದ ಕಾಲೇಜ್ ಮತ್ತು ಆಸ್ಪತ್ರೆ ಇವರ ಸಹಯೋಗದೊಂದಿಗೆ ಡಿ.23 ರಂದು ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರ ವಾತ, ಪಿತ್ತ, ಕಫ ಇವುಗಳ ಪರೀಕ್ಷೆ ಮಾಡಿ, ಅದಕ್ಕೆ ಪೂರಕವಾಗಿ ಸೇವಿಸಬೇಕಾದ ಆಹಾರ ವ್ಯವಸ್ಥೆಯ ಬಗ್ಗೆ ಅಲ್ಲಿನ ವೈದ್ಯ ವೃಂದ ಸವಿವರವಾಗಿ ತಿಳಿಸಿದರು. ವೈದ್ಯರಾದ ಡಾ. ದೇವಾನಂದ್ ಅಭಿಯಾನದ ಮಹತ್ವ ಹಾಗೂ ನಮ್ಮ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ನಾವು ಯಾವ ರೀತಿಯ ಆಹಾರವನ್ನು ಸೇವಿಸಬೇಕು ಎಂಬುದರ ಬಗ್ಗೆ ಸವಿವರವಾಗಿ ತಿಳಿಸಿದರು.

ಡಾ. ವಿಷ್ಣು ಹಾಗೂ ಡಾ. ವೀಣಾ ರವರು ತಮ್ಮ ವೈದ್ಯ ವಿದ್ಯಾರ್ಥಿಗಳ ಜೊತೆಗೆ ಎಲ್ಲರ ಆರೋಗ್ಯ ತಪಾಸಣೆಯನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊಫೆಸರ್ ಪದ್ಮನಾಭ ಕೆ. ಇವರು ವಹಿಸಿದರು.

ವೇದಿಕೆಯಲ್ಲಿ ಯುವ ರೆಡ್ ಕ್ರಾಸ್ ಘಟಕದ ಸಂಯೋಜನಾಧಿಕಾರಿ ಡಾ. ರವಿ ಎಂ. ಎನ್. ಹಾಗೂ ಪ್ರೊಫೆಸರ್ ನವೀನ್ ಉಪಸ್ಥಿತರಿದ್ದರು. ದ್ವಿತೀಯ ಎಂಕಾಂನ ಕುಮಾರಿ ಅನನ್ಯ ಜೈನ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

Related posts

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಟಿ.ಟಿ ವಾಹನ ರಸ್ತೆಗೆ ಪಲ್ಟಿ: ಉಜಿರೆಯ ಮಾಲಾಧಾರಿಗಳಿಗೆ ಗಾಯ

Suddi Udaya

ಕಣಿಯೂರು ಗ್ರಾಪಂ.ವ್ಯಾಪ್ತಿಯಲ್ಲಿ ಉಚಿತರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಎಪಿಎಂಸಿ ನಿವೃತ್ತ ಕಾರ್ಯದರ್ಶಿ ವೆಂಕಪ್ಪ ಗೌಡ ಕೈಯಾಡಿ ನಿಧನ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya
error: Content is protected !!