25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್” ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್ ಕಾರ್ಯಕ್ರಮವು ಆಂತರಿಕ ಗುಣಮಟ್ಟ ಭರವಸ ಕೋಶ, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್- ರೇಂಜರ್ಸ್ ಘಟಕ ಹಾಗೂ ಪ್ರಸನ್ನ ಆಯುರ್ವೇದ ಕಾಲೇಜ್ ಮತ್ತು ಆಸ್ಪತ್ರೆ ಇವರ ಸಹಯೋಗದೊಂದಿಗೆ ಡಿ.23 ರಂದು ಕಾಲೇಜಿನಲ್ಲಿ ನಡೆಯಿತು.

ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರ ವಾತ, ಪಿತ್ತ, ಕಫ ಇವುಗಳ ಪರೀಕ್ಷೆ ಮಾಡಿ, ಅದಕ್ಕೆ ಪೂರಕವಾಗಿ ಸೇವಿಸಬೇಕಾದ ಆಹಾರ ವ್ಯವಸ್ಥೆಯ ಬಗ್ಗೆ ಅಲ್ಲಿನ ವೈದ್ಯ ವೃಂದ ಸವಿವರವಾಗಿ ತಿಳಿಸಿದರು. ವೈದ್ಯರಾದ ಡಾ. ದೇವಾನಂದ್ ಅಭಿಯಾನದ ಮಹತ್ವ ಹಾಗೂ ನಮ್ಮ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ನಾವು ಯಾವ ರೀತಿಯ ಆಹಾರವನ್ನು ಸೇವಿಸಬೇಕು ಎಂಬುದರ ಬಗ್ಗೆ ಸವಿವರವಾಗಿ ತಿಳಿಸಿದರು.

ಡಾ. ವಿಷ್ಣು ಹಾಗೂ ಡಾ. ವೀಣಾ ರವರು ತಮ್ಮ ವೈದ್ಯ ವಿದ್ಯಾರ್ಥಿಗಳ ಜೊತೆಗೆ ಎಲ್ಲರ ಆರೋಗ್ಯ ತಪಾಸಣೆಯನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊಫೆಸರ್ ಪದ್ಮನಾಭ ಕೆ. ಇವರು ವಹಿಸಿದರು.

ವೇದಿಕೆಯಲ್ಲಿ ಯುವ ರೆಡ್ ಕ್ರಾಸ್ ಘಟಕದ ಸಂಯೋಜನಾಧಿಕಾರಿ ಡಾ. ರವಿ ಎಂ. ಎನ್. ಹಾಗೂ ಪ್ರೊಫೆಸರ್ ನವೀನ್ ಉಪಸ್ಥಿತರಿದ್ದರು. ದ್ವಿತೀಯ ಎಂಕಾಂನ ಕುಮಾರಿ ಅನನ್ಯ ಜೈನ್ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

Related posts

ಉಜಿರೆ ಶ್ರೀ. ಧ. ಮಂ ಆಂ.ಮಾ.(ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

Suddi Udaya

ಹದಗೆಟ್ಟ ರಾಜ್ಯದ ಆರ್ಥಿಕತೆ ತುಂಬಲು ಕುಮ್ಕಿ ಭೂಮಿಯ ಕಬಳಿಕೆಗೆ ಸರಕಾರದ ಹುನ್ನಾರ: ಬಿಜೆಪಿ ರೈತ ಮೋರ್ಚಾ ಆಕ್ರೋಶ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya

ಶಿರ್ಲಾಲುವಿನಲ್ಲಿ ಮೊಬೈಲ್ ಟವರನ್ನು ನುಂಗಿದ ಕಳೆಗಿಡಗಂಟಿ ಬಳ್ಳಿಗಳು, ಅಧಿಕಾರಿಗಳ ನಿರ್ಲಕ್ಷ್ಯ

Suddi Udaya
error: Content is protected !!