July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

ವೇಣೂರು: ಇಲ್ಲಿನ ಕರಿಮಣೇಲು ಸಂತ ಜೂಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಇತ್ತೀಚೆಗೆ ಸಂಚಾಲಕರಾದ ವಂ|ಫಾ| ಪೀಟರ್ ಅರಾನ್ಹರವರ ಅಧ್ಯಕ್ಷತೆಯಲ್ಲಿ ಶಾಲಾ ವಠಾರದಲ್ಲಿ ಜರುಗಿತು.

ವಂ|ಫಾ| ಸೈಮನ್ ಪಿಂಟೊ ಪ್ರಾಂಶುಪಾಲರು ಹೋಲಿ ರೀಡಿಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾದ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ, ರಾಜೇಶ್, ಸಮೂಹ ಸಂಪನ್ಮೂಲ ವ್ಯಕ್ತಿ ಬಜಿರೆ, ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ದಯಾನಂದ ಪೂಜಾರಿ, ಉದ್ಯಮಿ ಭಾಸ್ಕರ್ ಪೈ, ಜಿನರಾಜ್ ಜೈನ್ ಮಾಲಕರು ಪದ್ಮಾಂಬ ಸಮೂಹ ಸಂಸ್ಥೆ ವೇಣೂರು, ಹೆಚ್ ಮಹಮ್ಮದ್ ನಿವೃತ್ತ ಮೆನೇಜರ್ ಸಿ ಎ ಬ್ಯಾಂಕ್ ವೇಣೂರು ಶುಭ ಹಾರೈಸಿದರು.

ಸಭೆಯಲ್ಲಿ ನಿವೃತ್ತ ಶಿಕ್ಷಕ ಎಲ್‌ .ಜೆ. ಫೆರ್ನಾಂಡಿಸ್ ಧ್ವಜಾರೋಹಣಗೈದರು. ದಿನೇಶ್ ಗೌಡ, ಉದ್ಯಮಿ ಲಾರೆನ್ಸ್ ಲೋಬೊ, ಪಿ. ಎಚ್ .ಅಶ್ರಫ್ ರವರು ಬಹುಮಾನ ವಿತರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಮಾರ್ಸೆಲಿನ್ ಲೀನಾ ಪಿರೇರಾ ಸ್ವಾಗತಿಸಿದರು. ಸಹ ಶಿಕ್ಷಕಿ ಮೀನಾ ಮೋನಿಸ್ ವರದಿ ವಾಚಿಸಿದರು.

ಅಧ್ಯಾಪಕರಾದ ಮರೆಪ್ಪ ತಳಕೇರಿ ಅತಿಥಿಗಳನ್ನು ಗೌರವಿಸಿದರು. ಸುಮಲತಾ, ಲೀಲಾವತಿ,ಸುಪ್ರಿತಾ. ಆರ್ ನಿರೂಪಿಸಿ, ರಸಿಕ, ಸುಪ್ರಿತಾ.ಎಸ್ ಧನ್ಯವಾದವಿತ್ತರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ರೀತಿಯ ನೃತ್ಯ ರೂಪಕಗಳಿಂದ ಕೂಡಿದ ಸಾಂಸ್ಕೃತಿಕ ಕಾರ್ಯಕ್ರಮವು ವಿಜೃಂಭಣೆಯಿಂದ ಜರಗಿತು.

Related posts

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

Suddi Udaya

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಯೋಗಾಸನ ಕ್ರೀಡಾ ಛಾಂಪಿಯನ್ ಶಿಪ್ ನ್ನು ಉದ್ಘಾಟಿಸಿದ ಶ್ರೀ ಧ.ಮಂ.ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!