23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಬೆಳ್ತಂಗಡಿ: ಗುರುವಾಯನಕೆರೆ, ಕಾರ್ಕಳ ಮೂಡುಬಿದ್ರೆ ಕೂಡು ರಸ್ತೆಯ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು 5 ಬಾರಿ ಪ್ರತಿನಿಧಿಸಿರುವ ಬಡವರವರ ಪರ ಹೋರಾಟ ಮಾಡಿದ ಭ್ರಷ್ಟಾಚಾರವನ್ನು ಕಠಿಣ ಶಬ್ದಗಳಲ್ಲಿ ವಿರೋಧಿಸುತ್ತಿದ್ದ ನೇರ ನಡೆನುಡಿಯ ನಾಯಕ ಕುವೆಟ್ಟು ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿರುವ ದಿ| ಕೆ ವಸಂತ ಬಂಗೇರವರ ಪುತ್ಥಳಿಯನ್ನು ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಕಾರ್ಕಳ ಮೂಡುಬಿದರೆ ಕೂಡು ರಸ್ತೆಯ ಶಕ್ತಿನಗರ ಸರ್ಕಲ್ ನಲ್ಲಿ ಸ್ಥಾಪನೆ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ರವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ , ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನಗಳ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ತಾಲೂಕು ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಆಯುಬ್ ಡಿ.ಕೆ, ತಾಲೂಕು ಅಸಂಘಟಿತ ಕಾರ್ಮಿಕ ಸಮಿತಿಯ ಅಧ್ಯಕ್ಷ ಅಬ್ದುಲ್ ರಜಾಕ್, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಡಾ. ರಾಜಾರಾಮ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಲಂದರ್ ಕೊಕ್ಕಡ, ಧನಂಜಯ್ ರಾವ್ ಕುವೆಟ್ಟು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya

ಡಿ.25-26: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!