23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ


ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಡಿ.21 ರಂದು ಕ್ರಿಸ್ಮಸ್ ಆಚರಣೆಯನ್ನು ಬೆಳ್ತಂಗಡಿ, ಸಾಂತೋಮ್ ಟವರ್ ನಲ್ಲಿ ಆಯೋಜಿಸಲಾಗಿತ್ತು.


ಸೈಂಟ್ ಥೋಮಸ್ ಚರ್ಚ್ ಗಂಡಿಬಾಗಿಲು ಧರ್ಮಗುರುಗಳಾದ ವಂದನೀಯ ಫಾ. ಜೋಸ್ ಆಯಾಂಕುಡಿ ಕಾರ್ಯಕ್ರಮದ ಪ್ರಾರಂಭದ ಸವಿನೆಪುಗಳನ್ನು ನೆನಪಿಸಿ ಕೇಕ್ ಕತ್ತರಿಸುವ ಮೂಲಕ ಕ್ರಿಸ್ಮಸ್ ಸಂದೇಶ ನೀಡಿದರು. ಸೈಂಟ್ ತೋಮಸ್ ಪ್ರೌಢಶಾಲೆ ಗಂಡಿಬಾಗಿಲು ಇಲ್ಲಿಯ ಪ್ರಾಧ್ಯಾಪಕ ಥೋಮಸ್ ಪಿ. ಎ ಹಾಗೂ ಸ್ನೇಹಕಿರಣ್ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಏಲೀಯಮ ತೋಮಸ್ ಇವರು ಆಹಾರ ಕಿಟ್ ವಿತರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಸಿಸ್ಟರ್ ಸೆಲಿನ್ ಮದರ್ ಸುಪಿರಿಯರ್ ಎಸ್.ಎ.ಬಿ. ಎಸ್ ಕಾನ್ವೆಂಟ್, ಗಂಡಿಬಾಗಿಲು ಇವರು ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮದ ಲಕ್ಕಿ ಪರ್ಸನ್ ಆಫ್ ದಿ ಇಯರನ್ನು ಆಯ್ಕೆ ಮಾಡಿ, ಮಾತೃವೇದಿ ಸಂಘಟನೆಯ ಅಧ್ಯಕ್ಷೆ ಶ್ರೀಮತಿ ಪ್ರಭಾ ಇವರು ಶ್ರೀಮತಿ ಯಶೋದರವರಿಗೆ ಬಹುಮಾನ ವಿತರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ನವ ಜೀವನ ಬೆಂಬಲ ಕಾರ್ಯಕ್ರಮದ ಸದಸ್ಯರು ವಿವಿಧ ಗೀತೆಗಳನ್ನು ಹಾಡಿ ಎಲ್ಲರ ಮನರಂಜಿಸಿದರು.
ಹಾಗೂ ಮಾತೃ ವೇದಿ ಸಂಘಟನೆಯ ಸದಸ್ಯರು ಕ್ರಿಸ್ಮಸ್ ಕ್ಯಾರೋಲ್ ಹಾಡನ್ನು ಹಾಡಿದರು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನೇತೃತ್ವದಲ್ಲಿ ನವಜೀವನ ಕುಟುಂಬದ ಸದಸ್ಯರಿಗೆ ನೀಡಿರುವ ಸೇವೆಗೆ ಕೃತಜ್ಞತಾ ಭಾವವಾಗಿ ನವಜೀವನ ಕುಟುಂಬದ ಸದಸ್ಯರು ಕಿರುಕಾಣಿಕೆಯನ್ನು ಡಿ. ಕೆ ಆರ್.ಡಿ. ಎಸ್ ಸಂಸ್ಥೆಗೆ ಹಾಗೂ ವ. ಫಾದರ್ ಜೋಸ್ ಆಯಾಂಕುಡಿ ಇವರಿಗೆ ನೀಡಿದರು.


ಶ್ರೀಮತಿ ಲಲಿತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ
ಫಾ. ಬಿನೋಯಿ ಎ.ಜೆ. ಪ್ರಾಸ್ತವಿಕ ನುಡಿಯನ್ನು ಆಡಿದರು. ನವ ಜೀವನ ಬೆಂಬಲ ಕಾರ್ಯಕ್ರಮದ ಸದಸ್ಯೆ ಶ್ರೀಮತಿ ಪುಷ್ಪರವರು ಪ್ರಾರ್ಥನೆ ಹಾಡಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ವಿದ್ಯಾನಿಧಿ ಸಂಯೋಜಕಿ ಶ್ರೀಮತಿ ಜಿನಿ ಸ್ವಾಗತಿಸಿ,
ಕಾರ್ಯಕರ್ತರಾದ ಮಾರ್ಕ್ ಡಿ ಸೋಜರವರು ಕಾರ್ಯಕ್ರಮನ್ನು ವಂದಿಸಿದರು.


ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕಿ ಕು. ಶ್ರೇಯಾರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 2026 ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಪದಗ್ರಹಣ

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!