25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

ಉಜಿರೆ : ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸೇವೆಯ ಮನೋಭಾವನೆ ಉತ್ಕಟವಾಗಿದ್ದು ಆರಂಭದಲ್ಲಿ ಎಂತಹ ವ್ಯಕ್ತಿತ್ವ ಇದ್ದರೂ ಸಹ ಸ್ಕೌಟ್ಸ್ ಮತ್ತು ಗೈಡ್ಸ್ ಜೀವನಕ್ಕೆ ಅಡಿ ಇಟ್ಟ ನಂತರ ಅವರ ಜೀವನ ಉತ್ತಮ ನಡುವಳಿಕೆಯತ್ತ ಪರಿವರ್ತನೆ ಆಗುತ್ತದೆ ಅಂತಹ ಶಿಸ್ತನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಕಲಿಸುತ್ತದೆ ಎಂದು ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ರಾಜೇಶ ಬಿ ಹೇಳಿದರು.

ಅವರು ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಗೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ನೀಡುವ “ ದೀಕ್ಷಾ ಸಮಾರಂಭದಲ್ಲಿ” ಮುಖ್ಯ ಅತಿಥಿಯಾಗಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಯಾವಾಗಲೂ ಶಿಸ್ತು ಬದ್ಧರಾಗಿದ್ದು ಅವರು ಇತರೆ ವಿದ್ಯಾರ್ಥಿಗಳಿಗೆ ಪ್ರೇರಕರಾಗಿರಬೇಕು, ನಿಮ್ಮಲ್ಲಿ ದೇಶಪ್ರೇಮ, ಪರೋಪಕಾರ ಹಾಗೂ ಸೇವಾ ಮನೋಭಾವ ಯಾವತ್ತೂ ಇತರರಿಗೆ ಮಾದರಿಯಾಗಿರುತ್ತದೆ. ಯಾವಾಗ ನೀವು ಸ್ಕೌಟ್ ಗೈಡ್ ಚಟುವಟಿಕೆಗಳಲ್ಲಿ ನಿಮ್ಮನ್ನು ನೀವು ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತಿರೋ ಅವಾಗ ನಿಮ್ಮ ವ್ಯಕ್ತಿತ್ವ ಪರಿಪೂರ್ಣವಾಗಿ ಪರಿಪಕ್ವಗೊಳ್ಳುತ್ತದೆ ಆದ್ದರಿಂದ ನಿಮ್ಮ ಸಕ್ರಿಯ ತೊಡಗಿಸಿಕೊಳ್ಳುವಿಕೆ ಬಹಳ ಮಹತ್ವ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿ ಶುಭ ಹಾರೈಸಿದರು.

ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಯುನಿಟ್‌ ಲೀಡರ್ಗಳಾದ ಲಕ್ಷ್ಮಿಶ್ ಭಟ್ ಮತ್ತು ಶ್ರೀಮತಿ ಅಂಕಿತಾ ಎಮ್ ಕೆ ಇವರ ಮಾರ್ಗದರ್ಶನ ಮತ್ತು ತರಬೇತಿಯಲ್ಲಿ ವಿದ್ಯಾರ್ಥಿಗಳು ರೋವರ್ಸ್ ರೇಂಜರ್ಸ್ ದೀಕ್ಷೆ ಯನ್ನು ತೆಗೆದುಕೊಂಡು ಪ್ರತೀಜ್ಞಾ ವಿಧಿ ಗೈದರು.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

Suddi Udaya

ನಿಡ್ಲೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಕೊಕ್ರಾಡಿ : ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!