23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

ಉಜಿರೆ : ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸೇವೆಯ ಮನೋಭಾವನೆ ಉತ್ಕಟವಾಗಿದ್ದು ಆರಂಭದಲ್ಲಿ ಎಂತಹ ವ್ಯಕ್ತಿತ್ವ ಇದ್ದರೂ ಸಹ ಸ್ಕೌಟ್ಸ್ ಮತ್ತು ಗೈಡ್ಸ್ ಜೀವನಕ್ಕೆ ಅಡಿ ಇಟ್ಟ ನಂತರ ಅವರ ಜೀವನ ಉತ್ತಮ ನಡುವಳಿಕೆಯತ್ತ ಪರಿವರ್ತನೆ ಆಗುತ್ತದೆ ಅಂತಹ ಶಿಸ್ತನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಕಲಿಸುತ್ತದೆ ಎಂದು ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ರಾಜೇಶ ಬಿ ಹೇಳಿದರು.

ಅವರು ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಗೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ನೀಡುವ “ ದೀಕ್ಷಾ ಸಮಾರಂಭದಲ್ಲಿ” ಮುಖ್ಯ ಅತಿಥಿಯಾಗಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಯಾವಾಗಲೂ ಶಿಸ್ತು ಬದ್ಧರಾಗಿದ್ದು ಅವರು ಇತರೆ ವಿದ್ಯಾರ್ಥಿಗಳಿಗೆ ಪ್ರೇರಕರಾಗಿರಬೇಕು, ನಿಮ್ಮಲ್ಲಿ ದೇಶಪ್ರೇಮ, ಪರೋಪಕಾರ ಹಾಗೂ ಸೇವಾ ಮನೋಭಾವ ಯಾವತ್ತೂ ಇತರರಿಗೆ ಮಾದರಿಯಾಗಿರುತ್ತದೆ. ಯಾವಾಗ ನೀವು ಸ್ಕೌಟ್ ಗೈಡ್ ಚಟುವಟಿಕೆಗಳಲ್ಲಿ ನಿಮ್ಮನ್ನು ನೀವು ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತಿರೋ ಅವಾಗ ನಿಮ್ಮ ವ್ಯಕ್ತಿತ್ವ ಪರಿಪೂರ್ಣವಾಗಿ ಪರಿಪಕ್ವಗೊಳ್ಳುತ್ತದೆ ಆದ್ದರಿಂದ ನಿಮ್ಮ ಸಕ್ರಿಯ ತೊಡಗಿಸಿಕೊಳ್ಳುವಿಕೆ ಬಹಳ ಮಹತ್ವ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿ ಶುಭ ಹಾರೈಸಿದರು.

ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಯುನಿಟ್‌ ಲೀಡರ್ಗಳಾದ ಲಕ್ಷ್ಮಿಶ್ ಭಟ್ ಮತ್ತು ಶ್ರೀಮತಿ ಅಂಕಿತಾ ಎಮ್ ಕೆ ಇವರ ಮಾರ್ಗದರ್ಶನ ಮತ್ತು ತರಬೇತಿಯಲ್ಲಿ ವಿದ್ಯಾರ್ಥಿಗಳು ರೋವರ್ಸ್ ರೇಂಜರ್ಸ್ ದೀಕ್ಷೆ ಯನ್ನು ತೆಗೆದುಕೊಂಡು ಪ್ರತೀಜ್ಞಾ ವಿಧಿ ಗೈದರು.

Related posts

ಶಾಸಕ ಹರೀಶ್ ಪೂಂಜರಿಗೆ ಭಾ.ಜ.ಪ. ಬೆಳ್ತಂಗಡಿ ಮಂಡಲದಿಂದ ಗೌರವ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ

Suddi Udaya
error: Content is protected !!