September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

ಉಜಿರೆ : ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸೇವೆಯ ಮನೋಭಾವನೆ ಉತ್ಕಟವಾಗಿದ್ದು ಆರಂಭದಲ್ಲಿ ಎಂತಹ ವ್ಯಕ್ತಿತ್ವ ಇದ್ದರೂ ಸಹ ಸ್ಕೌಟ್ಸ್ ಮತ್ತು ಗೈಡ್ಸ್ ಜೀವನಕ್ಕೆ ಅಡಿ ಇಟ್ಟ ನಂತರ ಅವರ ಜೀವನ ಉತ್ತಮ ನಡುವಳಿಕೆಯತ್ತ ಪರಿವರ್ತನೆ ಆಗುತ್ತದೆ ಅಂತಹ ಶಿಸ್ತನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಕಲಿಸುತ್ತದೆ ಎಂದು ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ರಾಜೇಶ ಬಿ ಹೇಳಿದರು.

ಅವರು ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಗೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ನೀಡುವ “ ದೀಕ್ಷಾ ಸಮಾರಂಭದಲ್ಲಿ” ಮುಖ್ಯ ಅತಿಥಿಯಾಗಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಯಾವಾಗಲೂ ಶಿಸ್ತು ಬದ್ಧರಾಗಿದ್ದು ಅವರು ಇತರೆ ವಿದ್ಯಾರ್ಥಿಗಳಿಗೆ ಪ್ರೇರಕರಾಗಿರಬೇಕು, ನಿಮ್ಮಲ್ಲಿ ದೇಶಪ್ರೇಮ, ಪರೋಪಕಾರ ಹಾಗೂ ಸೇವಾ ಮನೋಭಾವ ಯಾವತ್ತೂ ಇತರರಿಗೆ ಮಾದರಿಯಾಗಿರುತ್ತದೆ. ಯಾವಾಗ ನೀವು ಸ್ಕೌಟ್ ಗೈಡ್ ಚಟುವಟಿಕೆಗಳಲ್ಲಿ ನಿಮ್ಮನ್ನು ನೀವು ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತಿರೋ ಅವಾಗ ನಿಮ್ಮ ವ್ಯಕ್ತಿತ್ವ ಪರಿಪೂರ್ಣವಾಗಿ ಪರಿಪಕ್ವಗೊಳ್ಳುತ್ತದೆ ಆದ್ದರಿಂದ ನಿಮ್ಮ ಸಕ್ರಿಯ ತೊಡಗಿಸಿಕೊಳ್ಳುವಿಕೆ ಬಹಳ ಮಹತ್ವ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿ ಶುಭ ಹಾರೈಸಿದರು.

ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಯುನಿಟ್‌ ಲೀಡರ್ಗಳಾದ ಲಕ್ಷ್ಮಿಶ್ ಭಟ್ ಮತ್ತು ಶ್ರೀಮತಿ ಅಂಕಿತಾ ಎಮ್ ಕೆ ಇವರ ಮಾರ್ಗದರ್ಶನ ಮತ್ತು ತರಬೇತಿಯಲ್ಲಿ ವಿದ್ಯಾರ್ಥಿಗಳು ರೋವರ್ಸ್ ರೇಂಜರ್ಸ್ ದೀಕ್ಷೆ ಯನ್ನು ತೆಗೆದುಕೊಂಡು ಪ್ರತೀಜ್ಞಾ ವಿಧಿ ಗೈದರು.

Related posts

ಬೆಳ್ತಂಗಡಿಯಲ್ಲಿ ಅಗ್ನಿ ಅನಾಹುತಗಳ ತಡೆಗಟ್ಟುವ ಕುರಿತು ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya
error: Content is protected !!