23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

ಧರ್ಮಸ್ಥಳ: ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಡಿ. 23 ರಂದು ಧರ್ಮಸ್ಥಳದ ಬೀಡು ಕಛೇರಿಯಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು   ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಸಿರಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಹೇಮಾವತಿ ವೀ ಹೆಗ್ಗಡೆ ದಂಪತಿಗಳು ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ  ವಾಲ್ ಕ್ಯಾಲೆಂಡರನ್ನು ಮತ್ತು ಟೇಬಲ್ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ  ಶುಭ ಹಾರೈಸಿದರು.

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಪರಮಪೂಜ್ಯ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದರು. 

ಅದೇ ರೀತಿ ಸಿರಿ ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್ ನ ಶೇಖರ್ ಹಾಗೂ ಸಿರಿ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ,  ಸಿರಿ ಸಂಸ್ಥೆಯ  ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಹಾಗೂ ಮಾರುಕಟ್ಟೆ ವಿಭಾಗದ ವಿವಿಧ ವಲಯಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಕಾಂಟ್ರಾಪ್ಷನ್ ಗೇಮಿಂಗ್ ಸ್ಪರ್ಧೆ”

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!