September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

ಧರ್ಮಸ್ಥಳ: ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಡಿ. 23 ರಂದು ಧರ್ಮಸ್ಥಳದ ಬೀಡು ಕಛೇರಿಯಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು   ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಸಿರಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಹೇಮಾವತಿ ವೀ ಹೆಗ್ಗಡೆ ದಂಪತಿಗಳು ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ  ವಾಲ್ ಕ್ಯಾಲೆಂಡರನ್ನು ಮತ್ತು ಟೇಬಲ್ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ  ಶುಭ ಹಾರೈಸಿದರು.

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಪರಮಪೂಜ್ಯ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದರು. 

ಅದೇ ರೀತಿ ಸಿರಿ ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್ ನ ಶೇಖರ್ ಹಾಗೂ ಸಿರಿ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ,  ಸಿರಿ ಸಂಸ್ಥೆಯ  ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಹಾಗೂ ಮಾರುಕಟ್ಟೆ ವಿಭಾಗದ ವಿವಿಧ ವಲಯಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ: ಬೋಳದಬೈಲು ಅಂಗನವಾಡಿ ಕಾರ್ಯಕರ್ತೆ ಸಂಗೀತಾ ನಿಧನ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಸ್ವಾಗತ ಕಾರ್ಯಕ್ರಮ

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya
error: Content is protected !!