23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

ಬಂದಾರು ಗ್ರಾಮ ಪಂಚಾಯಿತಿ ನಲ್ಲಿ ನಡೆದ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮದಲ್ಲಿ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕಿ ಉಷಾ ನಾಯಕ್ ಅವರು ಪ್ರಧಾನ ಮಂತ್ರಿ ಜೀವನ್ ಸುರಕ್ಷಾ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ, ಅಟಲ್ ಪಿಂಚಣಿ ಮತ್ತು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ ಧನ್ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಅನಿತಾ ಉಪಸ್ಥಿತರಿದ್ದರು. ಸಭೆಯಲ್ಲಿ ಕೆನರಾ ಬ್ಯಾಂಕ್ ನ ಮುಖ್ಯ ಪ್ರಬಂಧಕ ರೂಪೇಶ್ ರವರು ಕೆನರಾ ಏಂಜಲ್ ಅಕೌಂಟ್, ಎಸ್.ಹೆಚ್.ಜಿ ಲೋನ್ ಬಗ್ಗೆ ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬಂದಾರು ವಲಯದ ಮೇಲ್ವಿಚಾರಕಿಯಾದ ಸುಮಾನರವರು ಕಪಿಲ ಸ್ತ್ರೀಶಕ್ತಿ ಬ್ಯಾಂಕ್,ಬ್ಲಾಕ್ ಸೊಸೈಟಿ ಮೆಂಬರ್ ಆಗುವ ಬಗ್ಗೆ, ಬಾಲ ವಿಕಾಸ ಸಮಿತಿಯ ನಿಯಮ ಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.

ಸಭೆಯ ನಂತರ PMJSBY, PMJJBY, APY ಬಗ್ಗೆ ನೋಂದಾವಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಗೊಂಚಲು ಸಭೆಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರ

Suddi Udaya

ಬೆಳ್ತಂಗಡಿಯ ಶ್ರೀರಾಘವೇಂದ್ರ ಮಠದಲ್ಲಿ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

Suddi Udaya

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya
error: Content is protected !!