25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ನಾರಾವಿ : ನಾರಾವಿಯ ಶ್ರೀಮತಿ ವಿಜಯ ಎಂಬುವರು ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರವನ್ನು ವಿರೂಪಗೊಳಿಸಿ, ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಪ್ ಮೂಲಕ ಫೋಟೋವನ್ನು ಹರಿ ಬಿಟ್ಟಿದ್ದು ಜೈನ ಧರ್ಮಕ್ಕೆ ದಕ್ಕೆಯನ್ನು ಉಂಟುಮಾಡಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.24 ರಂದು ಪ್ರಕರಣ ದಾಖಲಾಗಿದೆ.

ಕಲ್ಮಂಜ ನಿವಾಸಿ ಪಣಿರಾಜ್ ಎಂಬುವರ ದೂರಿನಂತೆ ಡಿ.20 ರಂದು ನಾರಾವಿ ಗ್ರಾಮದ ವಿಜಯ ನಾರಾವಿ ಎಂಬುವರು ಜೈನ ಧರ್ಮಿಯರ ಆರಾದ್ಯ ದೇವರಾದ ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರಕ್ಕೆ ಮನುಷ್ಯನ ಮುಖವನ್ನು ಸೇರಿಸಿ ಚಡ್ಡಿ ಹಾಕಿ ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಫ್‌ ಮೂಲಕ ಫೋಟೋವನ್ನು ಹರಿ ಬಿಟ್ಟಿರುತ್ತಾರೆ.ಇವರು ಹಲವಾರು ಬಾರಿ ಇದೇ ರೀತಿ ಜೈನ ಧರ್ಮ ಹಾಗೂ ಜೈನ ಧರ್ಮಿಯಯರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಗೂ ಪೋಸ್ಟ್ ಗಳನ್ನು ಹಾಕಿ ಅಹಿಂಸಾ ಪ್ರಿಯರಾದ ಜೈನ ಧರ್ಮಿಯರ ಮನಸ್ಸಿಗೆ ಘಾಸಿ ಉಂಟು ಮಾಡಿರುತ್ತಾರೆ, ಇದರಿಂದ ಜೈನ ಧರ್ಮಿಯರ ಮನಸ್ಸಿಗೆ ನೋವು ಉಂಟಾಗಿರುವುದು ಮಾತ್ರವಲ್ಲ, ಸನಾತನ ವಿಶ್ವ ಧರ್ಮವಾದ ಜೈನ ಧರ್ಮದ ಗೌರವಕ್ಕೆ ಧಕ್ಕೆ ಉಂಟಾಗಿರುತ್ತದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya
error: Content is protected !!