July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ನಾರಾವಿ : ನಾರಾವಿಯ ಶ್ರೀಮತಿ ವಿಜಯ ಎಂಬುವರು ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರವನ್ನು ವಿರೂಪಗೊಳಿಸಿ, ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಪ್ ಮೂಲಕ ಫೋಟೋವನ್ನು ಹರಿ ಬಿಟ್ಟಿದ್ದು ಜೈನ ಧರ್ಮಕ್ಕೆ ದಕ್ಕೆಯನ್ನು ಉಂಟುಮಾಡಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.24 ರಂದು ಪ್ರಕರಣ ದಾಖಲಾಗಿದೆ.

ಕಲ್ಮಂಜ ನಿವಾಸಿ ಪಣಿರಾಜ್ ಎಂಬುವರ ದೂರಿನಂತೆ ಡಿ.20 ರಂದು ನಾರಾವಿ ಗ್ರಾಮದ ವಿಜಯ ನಾರಾವಿ ಎಂಬುವರು ಜೈನ ಧರ್ಮಿಯರ ಆರಾದ್ಯ ದೇವರಾದ ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರಕ್ಕೆ ಮನುಷ್ಯನ ಮುಖವನ್ನು ಸೇರಿಸಿ ಚಡ್ಡಿ ಹಾಕಿ ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಫ್‌ ಮೂಲಕ ಫೋಟೋವನ್ನು ಹರಿ ಬಿಟ್ಟಿರುತ್ತಾರೆ.ಇವರು ಹಲವಾರು ಬಾರಿ ಇದೇ ರೀತಿ ಜೈನ ಧರ್ಮ ಹಾಗೂ ಜೈನ ಧರ್ಮಿಯಯರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಗೂ ಪೋಸ್ಟ್ ಗಳನ್ನು ಹಾಕಿ ಅಹಿಂಸಾ ಪ್ರಿಯರಾದ ಜೈನ ಧರ್ಮಿಯರ ಮನಸ್ಸಿಗೆ ಘಾಸಿ ಉಂಟು ಮಾಡಿರುತ್ತಾರೆ, ಇದರಿಂದ ಜೈನ ಧರ್ಮಿಯರ ಮನಸ್ಸಿಗೆ ನೋವು ಉಂಟಾಗಿರುವುದು ಮಾತ್ರವಲ್ಲ, ಸನಾತನ ವಿಶ್ವ ಧರ್ಮವಾದ ಜೈನ ಧರ್ಮದ ಗೌರವಕ್ಕೆ ಧಕ್ಕೆ ಉಂಟಾಗಿರುತ್ತದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!