23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ನಾರಾವಿ : ನಾರಾವಿಯ ಶ್ರೀಮತಿ ವಿಜಯ ಎಂಬುವರು ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರವನ್ನು ವಿರೂಪಗೊಳಿಸಿ, ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಪ್ ಮೂಲಕ ಫೋಟೋವನ್ನು ಹರಿ ಬಿಟ್ಟಿದ್ದು ಜೈನ ಧರ್ಮಕ್ಕೆ ದಕ್ಕೆಯನ್ನು ಉಂಟುಮಾಡಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.24 ರಂದು ಪ್ರಕರಣ ದಾಖಲಾಗಿದೆ.

ಕಲ್ಮಂಜ ನಿವಾಸಿ ಪಣಿರಾಜ್ ಎಂಬುವರ ದೂರಿನಂತೆ ಡಿ.20 ರಂದು ನಾರಾವಿ ಗ್ರಾಮದ ವಿಜಯ ನಾರಾವಿ ಎಂಬುವರು ಜೈನ ಧರ್ಮಿಯರ ಆರಾದ್ಯ ದೇವರಾದ ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರಕ್ಕೆ ಮನುಷ್ಯನ ಮುಖವನ್ನು ಸೇರಿಸಿ ಚಡ್ಡಿ ಹಾಕಿ ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಫ್‌ ಮೂಲಕ ಫೋಟೋವನ್ನು ಹರಿ ಬಿಟ್ಟಿರುತ್ತಾರೆ.ಇವರು ಹಲವಾರು ಬಾರಿ ಇದೇ ರೀತಿ ಜೈನ ಧರ್ಮ ಹಾಗೂ ಜೈನ ಧರ್ಮಿಯಯರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಗೂ ಪೋಸ್ಟ್ ಗಳನ್ನು ಹಾಕಿ ಅಹಿಂಸಾ ಪ್ರಿಯರಾದ ಜೈನ ಧರ್ಮಿಯರ ಮನಸ್ಸಿಗೆ ಘಾಸಿ ಉಂಟು ಮಾಡಿರುತ್ತಾರೆ, ಇದರಿಂದ ಜೈನ ಧರ್ಮಿಯರ ಮನಸ್ಸಿಗೆ ನೋವು ಉಂಟಾಗಿರುವುದು ಮಾತ್ರವಲ್ಲ, ಸನಾತನ ವಿಶ್ವ ಧರ್ಮವಾದ ಜೈನ ಧರ್ಮದ ಗೌರವಕ್ಕೆ ಧಕ್ಕೆ ಉಂಟಾಗಿರುತ್ತದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
error: Content is protected !!