25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

ಧರ್ಮಸ್ಥಳ: ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಡಿ. 23 ರಂದು ಧರ್ಮಸ್ಥಳದ ಬೀಡು ಕಛೇರಿಯಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು   ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಸಿರಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಹೇಮಾವತಿ ವೀ ಹೆಗ್ಗಡೆ ದಂಪತಿಗಳು ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ  ವಾಲ್ ಕ್ಯಾಲೆಂಡರನ್ನು ಮತ್ತು ಟೇಬಲ್ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ  ಶುಭ ಹಾರೈಸಿದರು.

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಪರಮಪೂಜ್ಯ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದರು. 

ಅದೇ ರೀತಿ ಸಿರಿ ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್ ನ ಶೇಖರ್ ಹಾಗೂ ಸಿರಿ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ,  ಸಿರಿ ಸಂಸ್ಥೆಯ  ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಹಾಗೂ ಮಾರುಕಟ್ಟೆ ವಿಭಾಗದ ವಿವಿಧ ವಲಯಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ಎಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ; ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ: ದಿ. ಪ್ರೊ. ಎಸ್. ಪ್ರಭಾಕರ್ ರವರಿಗೆ ನುಡಿನಮನ

Suddi Udaya

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!