23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

ಧರ್ಮಸ್ಥಳ: ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಡಿ. 23 ರಂದು ಧರ್ಮಸ್ಥಳದ ಬೀಡು ಕಛೇರಿಯಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು   ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಸಿರಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಹೇಮಾವತಿ ವೀ ಹೆಗ್ಗಡೆ ದಂಪತಿಗಳು ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ  ವಾಲ್ ಕ್ಯಾಲೆಂಡರನ್ನು ಮತ್ತು ಟೇಬಲ್ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ  ಶುಭ ಹಾರೈಸಿದರು.

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಪರಮಪೂಜ್ಯ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದರು. 

ಅದೇ ರೀತಿ ಸಿರಿ ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್ ನ ಶೇಖರ್ ಹಾಗೂ ಸಿರಿ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ,  ಸಿರಿ ಸಂಸ್ಥೆಯ  ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಹಾಗೂ ಮಾರುಕಟ್ಟೆ ವಿಭಾಗದ ವಿವಿಧ ವಲಯಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

Suddi Udaya

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya

ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರಾಧ್ಯ ಪ್ರಥಮ ಸ್ಥಾನ

Suddi Udaya

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya
error: Content is protected !!