30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

ಬಂದಾರು ಗ್ರಾಮ ಪಂಚಾಯಿತಿ ನಲ್ಲಿ ನಡೆದ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮದಲ್ಲಿ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕಿ ಉಷಾ ನಾಯಕ್ ಅವರು ಪ್ರಧಾನ ಮಂತ್ರಿ ಜೀವನ್ ಸುರಕ್ಷಾ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ, ಅಟಲ್ ಪಿಂಚಣಿ ಮತ್ತು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ ಧನ್ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಅನಿತಾ ಉಪಸ್ಥಿತರಿದ್ದರು. ಸಭೆಯಲ್ಲಿ ಕೆನರಾ ಬ್ಯಾಂಕ್ ನ ಮುಖ್ಯ ಪ್ರಬಂಧಕ ರೂಪೇಶ್ ರವರು ಕೆನರಾ ಏಂಜಲ್ ಅಕೌಂಟ್, ಎಸ್.ಹೆಚ್.ಜಿ ಲೋನ್ ಬಗ್ಗೆ ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬಂದಾರು ವಲಯದ ಮೇಲ್ವಿಚಾರಕಿಯಾದ ಸುಮಾನರವರು ಕಪಿಲ ಸ್ತ್ರೀಶಕ್ತಿ ಬ್ಯಾಂಕ್,ಬ್ಲಾಕ್ ಸೊಸೈಟಿ ಮೆಂಬರ್ ಆಗುವ ಬಗ್ಗೆ, ಬಾಲ ವಿಕಾಸ ಸಮಿತಿಯ ನಿಯಮ ಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.

ಸಭೆಯ ನಂತರ PMJSBY, PMJJBY, APY ಬಗ್ಗೆ ನೋಂದಾವಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಗೊಂಚಲು ಸಭೆಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ತೆಕ್ಕಾರು ಬ್ರಹ್ಮಕಲಶೋತ್ಸವದಲ್ಲಿ ಶಾಸಕ ಹರೀಶ್ ಪೂಂಜರವರು ಮುಸ್ಲಿಂರನ್ನು ನಿಂದಿಸಿರುವುದು ಸಮುದಾಯಕ್ಕೆ ನೋವು ತಂದಿದೆ: ಮುಸ್ಲಿಂ ಮುಖಂಡರಿಂದ ಪತ್ರಿಕಾಗೋಷ್ಠಿ

Suddi Udaya

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ನಾಳೆ(ಜ.2) ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ

Suddi Udaya

ಲಾಯಿಲ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya
error: Content is protected !!