24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

ಬಂದಾರು ಗ್ರಾಮ ಪಂಚಾಯಿತಿ ನಲ್ಲಿ ನಡೆದ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮದಲ್ಲಿ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕಿ ಉಷಾ ನಾಯಕ್ ಅವರು ಪ್ರಧಾನ ಮಂತ್ರಿ ಜೀವನ್ ಸುರಕ್ಷಾ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ, ಅಟಲ್ ಪಿಂಚಣಿ ಮತ್ತು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ ಧನ್ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಅನಿತಾ ಉಪಸ್ಥಿತರಿದ್ದರು. ಸಭೆಯಲ್ಲಿ ಕೆನರಾ ಬ್ಯಾಂಕ್ ನ ಮುಖ್ಯ ಪ್ರಬಂಧಕ ರೂಪೇಶ್ ರವರು ಕೆನರಾ ಏಂಜಲ್ ಅಕೌಂಟ್, ಎಸ್.ಹೆಚ್.ಜಿ ಲೋನ್ ಬಗ್ಗೆ ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬಂದಾರು ವಲಯದ ಮೇಲ್ವಿಚಾರಕಿಯಾದ ಸುಮಾನರವರು ಕಪಿಲ ಸ್ತ್ರೀಶಕ್ತಿ ಬ್ಯಾಂಕ್,ಬ್ಲಾಕ್ ಸೊಸೈಟಿ ಮೆಂಬರ್ ಆಗುವ ಬಗ್ಗೆ, ಬಾಲ ವಿಕಾಸ ಸಮಿತಿಯ ನಿಯಮ ಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು.

ಸಭೆಯ ನಂತರ PMJSBY, PMJJBY, APY ಬಗ್ಗೆ ನೋಂದಾವಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಗೊಂಚಲು ಸಭೆಯ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಜೆಇಇ ಪರೀಕ್ಷೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ನಾರಾವಿ ಭಾರತ್ ಪ್ರೆಂಡ್ಸ್ ವತಿಯಿಂದ ಕಬಡ್ಡಿ ಪಂದ್ಯಾಟ: ಸುಲ್ಕೇರಿ ಜೆಕೆ ಅಟ್ಯಾಕರ್ಸ್ ತಂಡ ಪ್ರಥಮ ಸ್ಥಾನ

Suddi Udaya
error: Content is protected !!