25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

ಬೆಳ್ತಂಗಡಿ ತಾಲೂಕಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ ಕಾರ್ಯಕ್ರಮವನ್ನು ಡಿ.23 ರಂದು ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು.

ವೀರಭದ್ರಪ್ಪ ಎ.ಡಿ.ಸ.ಕೃ.ನಿ., ಇವರು ಪ್ರಾಸ್ತಾವಿಕ ಮಾತುಗಳನ್ನಾಡಿ , ರೈತರು ಇತ್ತೀಚೆಗೆ ತಮ್ಮ ಹೊಲದಲ್ಲಿ ಇಳುವರಿ ಕುಂಠಿತವಾಗುವುದನ್ನು ಕಾನೂತ್ತಿದ್ದು, ಸುಸ್ಥಿರ ಇಳುವರಿಗೆ ಹಾಗೂ ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿಯ ಅವಶ್ಯಕತೆಯಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಕೇಂದ್ರ ಬಿಂದು ಹಾಗೂ ಪ್ರಗತಿಪರ ಕೃಷಿಕರಾದ ಬಿ.ಕೆ ದೇವರಾವ್ ರವರು ಮಾತನಾಡಿ ಭತ್ತ ಕೃಷಿ ಮಾಡುವ ರೈತ ಎಂದೂ ಕೆಳಗೆ ಬೀಳುವುದಿಲ್ಲ. ಉತ್ತಮ ಆರೋಗ್ಯಕ್ಕೆ ತಮ್ಮದೇ ಹೊಲದಲ್ಲಿ ಸಾವಯವ ರೀತಿಯಲ್ಲಿ ಬೆಳೆದ ಭತ್ತ, ತರಕಾರಿ ಹಾಗೂ ಗೆಡ್ಡೆ ಗೆಣಸುಗಳು ಸೇವನೆ ಮಾಡಬೇಕು. ಇದರಿಂದ ಆರೋಗ್ಯವು ಸುಸ್ಥಿತಿಯಲ್ಲಿ ಇರುತ್ತದೆ. ಸಾವಯವ ಕೃಷಿಯಿಂದ ಮಣ್ಣಿನ ಆರೋಗ್ಯವು ಉತ್ತಮ ರೀತಿಯಲ್ಲಿರುತ್ತದೆ ಎಂದರು.

ಬೆಳ್ತಂಗಡಿ ಕೃಷಿಕ ಸಮಾಜ ನಿಕಟಪೂರ್ವ ಅಧ್ಯಕ್ಷ ಮಹಾವೀರ ಜೈನ್, ಮಾತನಾಡಿ ಕೃಷಿಕ ಸಮಾಜದ ಕಾರ್ಯಚಟುವಟಿಕೆಗಳು ಅದರ ಬೆಳವಣಿಗೆ ಹಾಗೂ ಅವರು ಮಾಡಿರುವ ಕೆಲಸಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.

ತಾ.ಕೃ.ಸ ನಿಕಟಪೂರ್ವ ಕಾರ್ಯದರ್ಶಿ ಮುನಿರಾಜ ಅಜ್ರಿ ಅವರು ಮಾತನಾಡಿ ರೈತರು ಆದಾಯ ತೆರಿಗೆ ನೀಡದೆ ಸ್ವತಂತ್ರ ರಾಗಿ ಆದಾಯ ಗಳಿಸಬಹುದಾಗಿದೆ. ಎಲ್ಲಾ ರೈತರು ತಮಗಿರುವ ಅಲ್ಪ ಜಮೀನಿನಲ್ಲಾದರು ಕೃಷಿ ಮಾಡಿದರೆ ಅದರಲ್ಲಿ ಬರುವ ಆದಾಯವನ್ನು ಹಾಗೂ ಫಲವಸ್ತುಗಳನ್ನು ನಾವು ಮುಂದಿನ ಜನಾಂಗಕ್ಕೆ ಕೊಡುಗೆಯಾಗಿ ನೀಡಬಹುದೆಂದು ತಿಳಿಸಿದರು.

ಕೃಷಿಕ ಸಮಾಜ ನಿಕಟಪೂರ್ವ ಖಜಾಂಚಿ ದಿನೇಶ್ ಗೌಡ ಮಾತನಾಡಿ ಭತ್ತ ಬೆಳೆಯುವ ರೈತರಿಗೆ ಸರ್ಕಾರವು ಇನ್ನಷ್ಟು ಸವಲತ್ತುಗಳನ್ನು ತೋಟಗಾರಿಕಾ ಬೆಳೆಗಳಿಗೆ ನೀಡುತ್ತಿದೆಯೋ ಅದೇ ರೀತಿ ನರೇಗಾ ಯೋಜನೆಯಡಿ ನೀಡಬೇಕು. ಯಂತ್ರಧಾರೆ ಕೇಂದ್ರಗಳು ಇನ್ನಷ್ಟು ಸಂಪನ್ಮೂಲ ಭರಿತವಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ಬಿ.ಕೆ ದೇವರಾವ್, ಕೃಷಿಕ ಸಮಾಜ ನಿಕಟಪೂರ್ವಾಧ್ಯಕ್ಷ ಮಹಾವೀರ ಜೈನ್, ಬಿಜೋತ್ಪಾದನಾ ಕೇಂದ್ರ ಗುತ್ತಿಗೆ ಕೃಷಿ ಕಾರ್ಮಿಕ ಗುರುವಪ್ಪ ಇವರನ್ನು ಸನ್ಮಾನಿಸಲಾಯಿತು.

ಕೃಷಿ ಅಧಿಕಾರಿ ಗಣೇಶ್ ಕಾರ್ಯಕ್ರಮ ನಿರೂಪಿಸಿದರು. ಕೃಷಿ ಇಲಾಖಾ ಸಿಬ್ಬಂದಿಗಳು ಹಾಗೂ ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾ.ಪಂ. ಗಳ ಕೃಷಿ ಸಖಿಯರು, ಪ್ರಗತಿಪರ ಕೃಷಿಕರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya
error: Content is protected !!