ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

ಬೆಳ್ತಂಗಡಿ ತಾಲೂಕಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ ಕಾರ್ಯಕ್ರಮವನ್ನು ಡಿ.23 ರಂದು ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಪ್ರಾರಂಭಿಸಲಾಯಿತು.

ವೀರಭದ್ರಪ್ಪ ಎ.ಡಿ.ಸ.ಕೃ.ನಿ., ಇವರು ಪ್ರಾಸ್ತಾವಿಕ ಮಾತುಗಳನ್ನಾಡಿ , ರೈತರು ಇತ್ತೀಚೆಗೆ ತಮ್ಮ ಹೊಲದಲ್ಲಿ ಇಳುವರಿ ಕುಂಠಿತವಾಗುವುದನ್ನು ಕಾನೂತ್ತಿದ್ದು, ಸುಸ್ಥಿರ ಇಳುವರಿಗೆ ಹಾಗೂ ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿಯ ಅವಶ್ಯಕತೆಯಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಕೇಂದ್ರ ಬಿಂದು ಹಾಗೂ ಪ್ರಗತಿಪರ ಕೃಷಿಕರಾದ ಬಿ.ಕೆ ದೇವರಾವ್ ರವರು ಮಾತನಾಡಿ ಭತ್ತ ಕೃಷಿ ಮಾಡುವ ರೈತ ಎಂದೂ ಕೆಳಗೆ ಬೀಳುವುದಿಲ್ಲ. ಉತ್ತಮ ಆರೋಗ್ಯಕ್ಕೆ ತಮ್ಮದೇ ಹೊಲದಲ್ಲಿ ಸಾವಯವ ರೀತಿಯಲ್ಲಿ ಬೆಳೆದ ಭತ್ತ, ತರಕಾರಿ ಹಾಗೂ ಗೆಡ್ಡೆ ಗೆಣಸುಗಳು ಸೇವನೆ ಮಾಡಬೇಕು. ಇದರಿಂದ ಆರೋಗ್ಯವು ಸುಸ್ಥಿತಿಯಲ್ಲಿ ಇರುತ್ತದೆ. ಸಾವಯವ ಕೃಷಿಯಿಂದ ಮಣ್ಣಿನ ಆರೋಗ್ಯವು ಉತ್ತಮ ರೀತಿಯಲ್ಲಿರುತ್ತದೆ ಎಂದರು.

ಬೆಳ್ತಂಗಡಿ ಕೃಷಿಕ ಸಮಾಜ ನಿಕಟಪೂರ್ವ ಅಧ್ಯಕ್ಷ ಮಹಾವೀರ ಜೈನ್, ಮಾತನಾಡಿ ಕೃಷಿಕ ಸಮಾಜದ ಕಾರ್ಯಚಟುವಟಿಕೆಗಳು ಅದರ ಬೆಳವಣಿಗೆ ಹಾಗೂ ಅವರು ಮಾಡಿರುವ ಕೆಲಸಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.

ತಾ.ಕೃ.ಸ ನಿಕಟಪೂರ್ವ ಕಾರ್ಯದರ್ಶಿ ಮುನಿರಾಜ ಅಜ್ರಿ ಅವರು ಮಾತನಾಡಿ ರೈತರು ಆದಾಯ ತೆರಿಗೆ ನೀಡದೆ ಸ್ವತಂತ್ರ ರಾಗಿ ಆದಾಯ ಗಳಿಸಬಹುದಾಗಿದೆ. ಎಲ್ಲಾ ರೈತರು ತಮಗಿರುವ ಅಲ್ಪ ಜಮೀನಿನಲ್ಲಾದರು ಕೃಷಿ ಮಾಡಿದರೆ ಅದರಲ್ಲಿ ಬರುವ ಆದಾಯವನ್ನು ಹಾಗೂ ಫಲವಸ್ತುಗಳನ್ನು ನಾವು ಮುಂದಿನ ಜನಾಂಗಕ್ಕೆ ಕೊಡುಗೆಯಾಗಿ ನೀಡಬಹುದೆಂದು ತಿಳಿಸಿದರು.

ಕೃಷಿಕ ಸಮಾಜ ನಿಕಟಪೂರ್ವ ಖಜಾಂಚಿ ದಿನೇಶ್ ಗೌಡ ಮಾತನಾಡಿ ಭತ್ತ ಬೆಳೆಯುವ ರೈತರಿಗೆ ಸರ್ಕಾರವು ಇನ್ನಷ್ಟು ಸವಲತ್ತುಗಳನ್ನು ತೋಟಗಾರಿಕಾ ಬೆಳೆಗಳಿಗೆ ನೀಡುತ್ತಿದೆಯೋ ಅದೇ ರೀತಿ ನರೇಗಾ ಯೋಜನೆಯಡಿ ನೀಡಬೇಕು. ಯಂತ್ರಧಾರೆ ಕೇಂದ್ರಗಳು ಇನ್ನಷ್ಟು ಸಂಪನ್ಮೂಲ ಭರಿತವಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕ ಬಿ.ಕೆ ದೇವರಾವ್, ಕೃಷಿಕ ಸಮಾಜ ನಿಕಟಪೂರ್ವಾಧ್ಯಕ್ಷ ಮಹಾವೀರ ಜೈನ್, ಬಿಜೋತ್ಪಾದನಾ ಕೇಂದ್ರ ಗುತ್ತಿಗೆ ಕೃಷಿ ಕಾರ್ಮಿಕ ಗುರುವಪ್ಪ ಇವರನ್ನು ಸನ್ಮಾನಿಸಲಾಯಿತು.

ಕೃಷಿ ಅಧಿಕಾರಿ ಗಣೇಶ್ ಕಾರ್ಯಕ್ರಮ ನಿರೂಪಿಸಿದರು. ಕೃಷಿ ಇಲಾಖಾ ಸಿಬ್ಬಂದಿಗಳು ಹಾಗೂ ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾ.ಪಂ. ಗಳ ಕೃಷಿ ಸಖಿಯರು, ಪ್ರಗತಿಪರ ಕೃಷಿಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಸಿ ಬಿ ಎಸ್ ಸಿ ಟಾಪರ್ ಅಕ್ಷಯ್ ಗೆ ಎಕ್ಸೆಲ್ ನಲ್ಲಿ ಗೌರವ

Suddi Udaya

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಜೂ.26: ಸೌಮ್ಯತಿಲಕ್ ಶೆಟ್ಟಿ ಇವರ ‘ಮಸಿಯ ಮಾತು’ ಕವನ ಸಂಕಲನ ಬಿಡುಗಡೆ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

Suddi Udaya
error: Content is protected !!