24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ನಾರಾವಿ : ನಾರಾವಿಯ ಶ್ರೀಮತಿ ವಿಜಯ ಎಂಬುವರು ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರವನ್ನು ವಿರೂಪಗೊಳಿಸಿ, ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಪ್ ಮೂಲಕ ಫೋಟೋವನ್ನು ಹರಿ ಬಿಟ್ಟಿದ್ದು ಜೈನ ಧರ್ಮಕ್ಕೆ ದಕ್ಕೆಯನ್ನು ಉಂಟುಮಾಡಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.24 ರಂದು ಪ್ರಕರಣ ದಾಖಲಾಗಿದೆ.

ಕಲ್ಮಂಜ ನಿವಾಸಿ ಪಣಿರಾಜ್ ಎಂಬುವರ ದೂರಿನಂತೆ ಡಿ.20 ರಂದು ನಾರಾವಿ ಗ್ರಾಮದ ವಿಜಯ ನಾರಾವಿ ಎಂಬುವರು ಜೈನ ಧರ್ಮಿಯರ ಆರಾದ್ಯ ದೇವರಾದ ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರಕ್ಕೆ ಮನುಷ್ಯನ ಮುಖವನ್ನು ಸೇರಿಸಿ ಚಡ್ಡಿ ಹಾಕಿ ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಫ್‌ ಮೂಲಕ ಫೋಟೋವನ್ನು ಹರಿ ಬಿಟ್ಟಿರುತ್ತಾರೆ.ಇವರು ಹಲವಾರು ಬಾರಿ ಇದೇ ರೀತಿ ಜೈನ ಧರ್ಮ ಹಾಗೂ ಜೈನ ಧರ್ಮಿಯಯರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಗೂ ಪೋಸ್ಟ್ ಗಳನ್ನು ಹಾಕಿ ಅಹಿಂಸಾ ಪ್ರಿಯರಾದ ಜೈನ ಧರ್ಮಿಯರ ಮನಸ್ಸಿಗೆ ಘಾಸಿ ಉಂಟು ಮಾಡಿರುತ್ತಾರೆ, ಇದರಿಂದ ಜೈನ ಧರ್ಮಿಯರ ಮನಸ್ಸಿಗೆ ನೋವು ಉಂಟಾಗಿರುವುದು ಮಾತ್ರವಲ್ಲ, ಸನಾತನ ವಿಶ್ವ ಧರ್ಮವಾದ ಜೈನ ಧರ್ಮದ ಗೌರವಕ್ಕೆ ಧಕ್ಕೆ ಉಂಟಾಗಿರುತ್ತದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾಳ ಶ್ರೀ ಕ್ಷೇತ್ರದಲ್ಲಿ ತೆನೆ ವಿತರಣೆ ಹಾಗೂ ಹೊಸ ಅಕ್ಕಿ ಊಟ

Suddi Udaya

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!