26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ನಾರಾವಿ : ನಾರಾವಿಯ ಶ್ರೀಮತಿ ವಿಜಯ ಎಂಬುವರು ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರವನ್ನು ವಿರೂಪಗೊಳಿಸಿ, ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಪ್ ಮೂಲಕ ಫೋಟೋವನ್ನು ಹರಿ ಬಿಟ್ಟಿದ್ದು ಜೈನ ಧರ್ಮಕ್ಕೆ ದಕ್ಕೆಯನ್ನು ಉಂಟುಮಾಡಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.24 ರಂದು ಪ್ರಕರಣ ದಾಖಲಾಗಿದೆ.

ಕಲ್ಮಂಜ ನಿವಾಸಿ ಪಣಿರಾಜ್ ಎಂಬುವರ ದೂರಿನಂತೆ ಡಿ.20 ರಂದು ನಾರಾವಿ ಗ್ರಾಮದ ವಿಜಯ ನಾರಾವಿ ಎಂಬುವರು ಜೈನ ಧರ್ಮಿಯರ ಆರಾದ್ಯ ದೇವರಾದ ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರಕ್ಕೆ ಮನುಷ್ಯನ ಮುಖವನ್ನು ಸೇರಿಸಿ ಚಡ್ಡಿ ಹಾಕಿ ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಫ್‌ ಮೂಲಕ ಫೋಟೋವನ್ನು ಹರಿ ಬಿಟ್ಟಿರುತ್ತಾರೆ.ಇವರು ಹಲವಾರು ಬಾರಿ ಇದೇ ರೀತಿ ಜೈನ ಧರ್ಮ ಹಾಗೂ ಜೈನ ಧರ್ಮಿಯಯರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಗೂ ಪೋಸ್ಟ್ ಗಳನ್ನು ಹಾಕಿ ಅಹಿಂಸಾ ಪ್ರಿಯರಾದ ಜೈನ ಧರ್ಮಿಯರ ಮನಸ್ಸಿಗೆ ಘಾಸಿ ಉಂಟು ಮಾಡಿರುತ್ತಾರೆ, ಇದರಿಂದ ಜೈನ ಧರ್ಮಿಯರ ಮನಸ್ಸಿಗೆ ನೋವು ಉಂಟಾಗಿರುವುದು ಮಾತ್ರವಲ್ಲ, ಸನಾತನ ವಿಶ್ವ ಧರ್ಮವಾದ ಜೈನ ಧರ್ಮದ ಗೌರವಕ್ಕೆ ಧಕ್ಕೆ ಉಂಟಾಗಿರುತ್ತದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya
error: Content is protected !!