July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ನಾರಾವಿ : ನಾರಾವಿಯ ಶ್ರೀಮತಿ ವಿಜಯ ಎಂಬುವರು ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರವನ್ನು ವಿರೂಪಗೊಳಿಸಿ, ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಪ್ ಮೂಲಕ ಫೋಟೋವನ್ನು ಹರಿ ಬಿಟ್ಟಿದ್ದು ಜೈನ ಧರ್ಮಕ್ಕೆ ದಕ್ಕೆಯನ್ನು ಉಂಟುಮಾಡಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.24 ರಂದು ಪ್ರಕರಣ ದಾಖಲಾಗಿದೆ.

ಕಲ್ಮಂಜ ನಿವಾಸಿ ಪಣಿರಾಜ್ ಎಂಬುವರ ದೂರಿನಂತೆ ಡಿ.20 ರಂದು ನಾರಾವಿ ಗ್ರಾಮದ ವಿಜಯ ನಾರಾವಿ ಎಂಬುವರು ಜೈನ ಧರ್ಮಿಯರ ಆರಾದ್ಯ ದೇವರಾದ ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರಕ್ಕೆ ಮನುಷ್ಯನ ಮುಖವನ್ನು ಸೇರಿಸಿ ಚಡ್ಡಿ ಹಾಕಿ ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಫ್‌ ಮೂಲಕ ಫೋಟೋವನ್ನು ಹರಿ ಬಿಟ್ಟಿರುತ್ತಾರೆ.ಇವರು ಹಲವಾರು ಬಾರಿ ಇದೇ ರೀತಿ ಜೈನ ಧರ್ಮ ಹಾಗೂ ಜೈನ ಧರ್ಮಿಯಯರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಗೂ ಪೋಸ್ಟ್ ಗಳನ್ನು ಹಾಕಿ ಅಹಿಂಸಾ ಪ್ರಿಯರಾದ ಜೈನ ಧರ್ಮಿಯರ ಮನಸ್ಸಿಗೆ ಘಾಸಿ ಉಂಟು ಮಾಡಿರುತ್ತಾರೆ, ಇದರಿಂದ ಜೈನ ಧರ್ಮಿಯರ ಮನಸ್ಸಿಗೆ ನೋವು ಉಂಟಾಗಿರುವುದು ಮಾತ್ರವಲ್ಲ, ಸನಾತನ ವಿಶ್ವ ಧರ್ಮವಾದ ಜೈನ ಧರ್ಮದ ಗೌರವಕ್ಕೆ ಧಕ್ಕೆ ಉಂಟಾಗಿರುತ್ತದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಲಾಯಿಲ: ಬೈಕ್ ಸ್ಕಿಡ್ ಆಗಿ ಬಿದ್ದು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

Suddi Udaya
error: Content is protected !!