25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ನಾರಾವಿ : ನಾರಾವಿಯ ಶ್ರೀಮತಿ ವಿಜಯ ಎಂಬುವರು ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರವನ್ನು ವಿರೂಪಗೊಳಿಸಿ, ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಪ್ ಮೂಲಕ ಫೋಟೋವನ್ನು ಹರಿ ಬಿಟ್ಟಿದ್ದು ಜೈನ ಧರ್ಮಕ್ಕೆ ದಕ್ಕೆಯನ್ನು ಉಂಟುಮಾಡಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.24 ರಂದು ಪ್ರಕರಣ ದಾಖಲಾಗಿದೆ.

ಕಲ್ಮಂಜ ನಿವಾಸಿ ಪಣಿರಾಜ್ ಎಂಬುವರ ದೂರಿನಂತೆ ಡಿ.20 ರಂದು ನಾರಾವಿ ಗ್ರಾಮದ ವಿಜಯ ನಾರಾವಿ ಎಂಬುವರು ಜೈನ ಧರ್ಮಿಯರ ಆರಾದ್ಯ ದೇವರಾದ ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರಕ್ಕೆ ಮನುಷ್ಯನ ಮುಖವನ್ನು ಸೇರಿಸಿ ಚಡ್ಡಿ ಹಾಕಿ ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಫ್‌ ಮೂಲಕ ಫೋಟೋವನ್ನು ಹರಿ ಬಿಟ್ಟಿರುತ್ತಾರೆ.ಇವರು ಹಲವಾರು ಬಾರಿ ಇದೇ ರೀತಿ ಜೈನ ಧರ್ಮ ಹಾಗೂ ಜೈನ ಧರ್ಮಿಯಯರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಗೂ ಪೋಸ್ಟ್ ಗಳನ್ನು ಹಾಕಿ ಅಹಿಂಸಾ ಪ್ರಿಯರಾದ ಜೈನ ಧರ್ಮಿಯರ ಮನಸ್ಸಿಗೆ ಘಾಸಿ ಉಂಟು ಮಾಡಿರುತ್ತಾರೆ, ಇದರಿಂದ ಜೈನ ಧರ್ಮಿಯರ ಮನಸ್ಸಿಗೆ ನೋವು ಉಂಟಾಗಿರುವುದು ಮಾತ್ರವಲ್ಲ, ಸನಾತನ ವಿಶ್ವ ಧರ್ಮವಾದ ಜೈನ ಧರ್ಮದ ಗೌರವಕ್ಕೆ ಧಕ್ಕೆ ಉಂಟಾಗಿರುತ್ತದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ತಾಲೂಕಿನ ಹಲವು ಕಡೆ ಯೋಗ ದಿನಾಚರಣೆ ಅಂಗವಾಗಿ ಏಕಕಾಲಕ್ಕೆ 20 ತರಬೇತಿ ಕಾರ್ಯಕ್ರಮಗಳು

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಕಡಿರುದ್ಯಾವರ ಮತ್ತು ಮುಂಡಾಜೆ ಪಂಚಾಯತ್ ಅರಿವು ಕೇಂದ್ರಗಳಿಗೆ ಕಂಪ್ಯೂಟರ್ ಹಾಗೂ ಸ್ಮಾರ್ಟ್ ಮೊಬೈಲ್ ವಿತರಣೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya
error: Content is protected !!