23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.23ರಂದು ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಸೇಕ್ರೆಡ್ ಹಾರ್ಟ್ ಕೆಳಅಂತಸ್ತಿನ ಸಭಾಭವನದಲ್ಲಿ ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳು ಹಾಡು ನೃತ್ಯ ನಾಟಕದ ಮೂಲಕ ಕ್ರಿಸ್ಮಸ್ ಹಬ್ಬದ ಮಹತ್ವವನ್ನು ಪ್ರದರ್ಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ವಹಿಸಿ ಮಾತನಾಡಿ ನಾವು ನಮ್ಮ ಜೀವನದಲ್ಲಿ ಎಲ್ಲವನ್ನೂ ಪ್ರೀತಿಸುವ, ಗೌರವಿಸುವ ಗುಣವನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿ, ಮಕ್ಕಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗರ್ಡಾಡಿ ಚರ್ಚ್ ನ ಧರ್ಮ ಗುರುಗಳಾದ ವಂ|ಸ್ವಾ| ಆರ್ಥರ್ ಪ್ರಶಾಂತ್ ಮೀನೇಜಸ್ ಮಾತನಾಡಿ ಕ್ರಿಸ್ಮಸ್ ಹಬ್ಬ ನಮಗೆಲ್ಲರಿಗೂ ಶಾಂತಿ ಸಮಾಧಾನವನ್ನು ತರಲಿ ಎಂದು ಹೇಳಿ, ಮಕ್ಕಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ| ಸ್ವಾ | ದೀಪಕ್ ಲಿಯೊ ಡೇಸರವರು, ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಚೇತನರವರು, ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೂರಜ್ ಚಾಲ್ಸ್ ನ್ಯೂನಸ್ ರವರು, ಗಾಡಿಯನ್ ಏಂಜಲ್ಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಹೆಲೆನ್ ಮೋನಿಕರವರು, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಶಿಕ್ಷಕ- ಶಿಕ್ಷಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಗ್ಲೆನ್ಸನ್ ಮತ್ತು ಸನ ನಿರೂಪಿಸಿ, ನಿಧಿಶ್ ಶೆಟ್ಟಿರವರು ಸ್ವಾಗತಿಸಿ, ಮಹಮ್ಮದ್ ಅನೀಕ್ ಧನ್ಯವಾದವಿತ್ತರು.

Related posts

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya
error: Content is protected !!