27.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

ಉಜಿರೆ : ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸೇವೆಯ ಮನೋಭಾವನೆ ಉತ್ಕಟವಾಗಿದ್ದು ಆರಂಭದಲ್ಲಿ ಎಂತಹ ವ್ಯಕ್ತಿತ್ವ ಇದ್ದರೂ ಸಹ ಸ್ಕೌಟ್ಸ್ ಮತ್ತು ಗೈಡ್ಸ್ ಜೀವನಕ್ಕೆ ಅಡಿ ಇಟ್ಟ ನಂತರ ಅವರ ಜೀವನ ಉತ್ತಮ ನಡುವಳಿಕೆಯತ್ತ ಪರಿವರ್ತನೆ ಆಗುತ್ತದೆ ಅಂತಹ ಶಿಸ್ತನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಕಲಿಸುತ್ತದೆ ಎಂದು ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ರಾಜೇಶ ಬಿ ಹೇಳಿದರು.

ಅವರು ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಗೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ನೀಡುವ “ ದೀಕ್ಷಾ ಸಮಾರಂಭದಲ್ಲಿ” ಮುಖ್ಯ ಅತಿಥಿಯಾಗಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಯಾವಾಗಲೂ ಶಿಸ್ತು ಬದ್ಧರಾಗಿದ್ದು ಅವರು ಇತರೆ ವಿದ್ಯಾರ್ಥಿಗಳಿಗೆ ಪ್ರೇರಕರಾಗಿರಬೇಕು, ನಿಮ್ಮಲ್ಲಿ ದೇಶಪ್ರೇಮ, ಪರೋಪಕಾರ ಹಾಗೂ ಸೇವಾ ಮನೋಭಾವ ಯಾವತ್ತೂ ಇತರರಿಗೆ ಮಾದರಿಯಾಗಿರುತ್ತದೆ. ಯಾವಾಗ ನೀವು ಸ್ಕೌಟ್ ಗೈಡ್ ಚಟುವಟಿಕೆಗಳಲ್ಲಿ ನಿಮ್ಮನ್ನು ನೀವು ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತಿರೋ ಅವಾಗ ನಿಮ್ಮ ವ್ಯಕ್ತಿತ್ವ ಪರಿಪೂರ್ಣವಾಗಿ ಪರಿಪಕ್ವಗೊಳ್ಳುತ್ತದೆ ಆದ್ದರಿಂದ ನಿಮ್ಮ ಸಕ್ರಿಯ ತೊಡಗಿಸಿಕೊಳ್ಳುವಿಕೆ ಬಹಳ ಮಹತ್ವ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿ ಶುಭ ಹಾರೈಸಿದರು.

ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಯುನಿಟ್‌ ಲೀಡರ್ಗಳಾದ ಲಕ್ಷ್ಮಿಶ್ ಭಟ್ ಮತ್ತು ಶ್ರೀಮತಿ ಅಂಕಿತಾ ಎಮ್ ಕೆ ಇವರ ಮಾರ್ಗದರ್ಶನ ಮತ್ತು ತರಬೇತಿಯಲ್ಲಿ ವಿದ್ಯಾರ್ಥಿಗಳು ರೋವರ್ಸ್ ರೇಂಜರ್ಸ್ ದೀಕ್ಷೆ ಯನ್ನು ತೆಗೆದುಕೊಂಡು ಪ್ರತೀಜ್ಞಾ ವಿಧಿ ಗೈದರು.

Related posts

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya

ತೋಟತ್ತಾಡಿ ಗ್ರಾಮ ಸಮಿತಿ ಹಾಗೂ ಬೂತ್ ಸಮಿತಿಗಳ ವತಿಯಿಂದ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡರಿಗೆ ಸನ್ಮಾನ

Suddi Udaya

ಪೂಜಾ ಕಾರ್ಯಕ್ರಮದ ಊಟದ ವೇಳೆ ಕುಟುಂಬಸ್ಥರಿಂದ ಹಲ್ಲೆ, ಜೀವಬೆದರಿಕೆ ಆರೋಪ; ಧರ್ಮಸ್ಥಳ ಠಾಣೆಗೆ ದೂರು

Suddi Udaya

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya
error: Content is protected !!