September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

ಉಜಿರೆ : ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸೇವೆಯ ಮನೋಭಾವನೆ ಉತ್ಕಟವಾಗಿದ್ದು ಆರಂಭದಲ್ಲಿ ಎಂತಹ ವ್ಯಕ್ತಿತ್ವ ಇದ್ದರೂ ಸಹ ಸ್ಕೌಟ್ಸ್ ಮತ್ತು ಗೈಡ್ಸ್ ಜೀವನಕ್ಕೆ ಅಡಿ ಇಟ್ಟ ನಂತರ ಅವರ ಜೀವನ ಉತ್ತಮ ನಡುವಳಿಕೆಯತ್ತ ಪರಿವರ್ತನೆ ಆಗುತ್ತದೆ ಅಂತಹ ಶಿಸ್ತನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಕಲಿಸುತ್ತದೆ ಎಂದು ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯರಾದ ಡಾ.ರಾಜೇಶ ಬಿ ಹೇಳಿದರು.

ಅವರು ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಗೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ನೀಡುವ “ ದೀಕ್ಷಾ ಸಮಾರಂಭದಲ್ಲಿ” ಮುಖ್ಯ ಅತಿಥಿಯಾಗಿ ಮಾತನಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಯಾವಾಗಲೂ ಶಿಸ್ತು ಬದ್ಧರಾಗಿದ್ದು ಅವರು ಇತರೆ ವಿದ್ಯಾರ್ಥಿಗಳಿಗೆ ಪ್ರೇರಕರಾಗಿರಬೇಕು, ನಿಮ್ಮಲ್ಲಿ ದೇಶಪ್ರೇಮ, ಪರೋಪಕಾರ ಹಾಗೂ ಸೇವಾ ಮನೋಭಾವ ಯಾವತ್ತೂ ಇತರರಿಗೆ ಮಾದರಿಯಾಗಿರುತ್ತದೆ. ಯಾವಾಗ ನೀವು ಸ್ಕೌಟ್ ಗೈಡ್ ಚಟುವಟಿಕೆಗಳಲ್ಲಿ ನಿಮ್ಮನ್ನು ನೀವು ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತಿರೋ ಅವಾಗ ನಿಮ್ಮ ವ್ಯಕ್ತಿತ್ವ ಪರಿಪೂರ್ಣವಾಗಿ ಪರಿಪಕ್ವಗೊಳ್ಳುತ್ತದೆ ಆದ್ದರಿಂದ ನಿಮ್ಮ ಸಕ್ರಿಯ ತೊಡಗಿಸಿಕೊಳ್ಳುವಿಕೆ ಬಹಳ ಮಹತ್ವ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿ ಶುಭ ಹಾರೈಸಿದರು.

ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಯುನಿಟ್‌ ಲೀಡರ್ಗಳಾದ ಲಕ್ಷ್ಮಿಶ್ ಭಟ್ ಮತ್ತು ಶ್ರೀಮತಿ ಅಂಕಿತಾ ಎಮ್ ಕೆ ಇವರ ಮಾರ್ಗದರ್ಶನ ಮತ್ತು ತರಬೇತಿಯಲ್ಲಿ ವಿದ್ಯಾರ್ಥಿಗಳು ರೋವರ್ಸ್ ರೇಂಜರ್ಸ್ ದೀಕ್ಷೆ ಯನ್ನು ತೆಗೆದುಕೊಂಡು ಪ್ರತೀಜ್ಞಾ ವಿಧಿ ಗೈದರು.

Related posts

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಜ.25: ಕೊಕ್ಕಡ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!