24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

ಧರ್ಮಸ್ಥಳ: ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಡಿ. 23 ರಂದು ಧರ್ಮಸ್ಥಳದ ಬೀಡು ಕಛೇರಿಯಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು   ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಸಿರಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಹೇಮಾವತಿ ವೀ ಹೆಗ್ಗಡೆ ದಂಪತಿಗಳು ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ  ವಾಲ್ ಕ್ಯಾಲೆಂಡರನ್ನು ಮತ್ತು ಟೇಬಲ್ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ  ಶುಭ ಹಾರೈಸಿದರು.

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಪರಮಪೂಜ್ಯ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದರು. 

ಅದೇ ರೀತಿ ಸಿರಿ ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್ ನ ಶೇಖರ್ ಹಾಗೂ ಸಿರಿ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ,  ಸಿರಿ ಸಂಸ್ಥೆಯ  ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಹಾಗೂ ಮಾರುಕಟ್ಟೆ ವಿಭಾಗದ ವಿವಿಧ ವಲಯಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

Suddi Udaya

ಕೊಕ್ಕಡ: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಪಿಟ್ ಇಂಡಿಯಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಜಮೀಯತುಲ್ ಫಲಾಹ್ ವತಿಯಿಂದ ಪರೀಕ್ಷಾ ಪೂರ್ವ ತರಬೇತಿ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!