September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

ಧರ್ಮಸ್ಥಳ: ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಡಿ. 23 ರಂದು ಧರ್ಮಸ್ಥಳದ ಬೀಡು ಕಛೇರಿಯಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು   ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಸಿರಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಹೇಮಾವತಿ ವೀ ಹೆಗ್ಗಡೆ ದಂಪತಿಗಳು ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ  ವಾಲ್ ಕ್ಯಾಲೆಂಡರನ್ನು ಮತ್ತು ಟೇಬಲ್ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ  ಶುಭ ಹಾರೈಸಿದರು.

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಪರಮಪೂಜ್ಯ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದರು. 

ಅದೇ ರೀತಿ ಸಿರಿ ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್ ನ ಶೇಖರ್ ಹಾಗೂ ಸಿರಿ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ,  ಸಿರಿ ಸಂಸ್ಥೆಯ  ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಹಾಗೂ ಮಾರುಕಟ್ಟೆ ವಿಭಾಗದ ವಿವಿಧ ವಲಯಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!