25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ನಾರಾವಿ : ನಾರಾವಿಯ ಶ್ರೀಮತಿ ವಿಜಯ ಎಂಬುವರು ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರವನ್ನು ವಿರೂಪಗೊಳಿಸಿ, ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಪ್ ಮೂಲಕ ಫೋಟೋವನ್ನು ಹರಿ ಬಿಟ್ಟಿದ್ದು ಜೈನ ಧರ್ಮಕ್ಕೆ ದಕ್ಕೆಯನ್ನು ಉಂಟುಮಾಡಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.24 ರಂದು ಪ್ರಕರಣ ದಾಖಲಾಗಿದೆ.

ಕಲ್ಮಂಜ ನಿವಾಸಿ ಪಣಿರಾಜ್ ಎಂಬುವರ ದೂರಿನಂತೆ ಡಿ.20 ರಂದು ನಾರಾವಿ ಗ್ರಾಮದ ವಿಜಯ ನಾರಾವಿ ಎಂಬುವರು ಜೈನ ಧರ್ಮಿಯರ ಆರಾದ್ಯ ದೇವರಾದ ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರಕ್ಕೆ ಮನುಷ್ಯನ ಮುಖವನ್ನು ಸೇರಿಸಿ ಚಡ್ಡಿ ಹಾಕಿ ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಫ್‌ ಮೂಲಕ ಫೋಟೋವನ್ನು ಹರಿ ಬಿಟ್ಟಿರುತ್ತಾರೆ.ಇವರು ಹಲವಾರು ಬಾರಿ ಇದೇ ರೀತಿ ಜೈನ ಧರ್ಮ ಹಾಗೂ ಜೈನ ಧರ್ಮಿಯಯರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಗೂ ಪೋಸ್ಟ್ ಗಳನ್ನು ಹಾಕಿ ಅಹಿಂಸಾ ಪ್ರಿಯರಾದ ಜೈನ ಧರ್ಮಿಯರ ಮನಸ್ಸಿಗೆ ಘಾಸಿ ಉಂಟು ಮಾಡಿರುತ್ತಾರೆ, ಇದರಿಂದ ಜೈನ ಧರ್ಮಿಯರ ಮನಸ್ಸಿಗೆ ನೋವು ಉಂಟಾಗಿರುವುದು ಮಾತ್ರವಲ್ಲ, ಸನಾತನ ವಿಶ್ವ ಧರ್ಮವಾದ ಜೈನ ಧರ್ಮದ ಗೌರವಕ್ಕೆ ಧಕ್ಕೆ ಉಂಟಾಗಿರುತ್ತದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಮೇಲಂತಬೆಟ್ಟು: ನಡುವಡ್ಕ ನಿವಾಸಿ ಹೊನ್ನಮ್ಮ ನಿಧನ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya
error: Content is protected !!