23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

ನಾರಾವಿ : ನಾರಾವಿಯ ಶ್ರೀಮತಿ ವಿಜಯ ಎಂಬುವರು ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರವನ್ನು ವಿರೂಪಗೊಳಿಸಿ, ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಪ್ ಮೂಲಕ ಫೋಟೋವನ್ನು ಹರಿ ಬಿಟ್ಟಿದ್ದು ಜೈನ ಧರ್ಮಕ್ಕೆ ದಕ್ಕೆಯನ್ನು ಉಂಟುಮಾಡಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಡಿ.24 ರಂದು ಪ್ರಕರಣ ದಾಖಲಾಗಿದೆ.

ಕಲ್ಮಂಜ ನಿವಾಸಿ ಪಣಿರಾಜ್ ಎಂಬುವರ ದೂರಿನಂತೆ ಡಿ.20 ರಂದು ನಾರಾವಿ ಗ್ರಾಮದ ವಿಜಯ ನಾರಾವಿ ಎಂಬುವರು ಜೈನ ಧರ್ಮಿಯರ ಆರಾದ್ಯ ದೇವರಾದ ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರಕ್ಕೆ ಮನುಷ್ಯನ ಮುಖವನ್ನು ಸೇರಿಸಿ ಚಡ್ಡಿ ಹಾಕಿ ತನ್ನ ಫೇಸ್‌ ಬುಕ್‌ ಖಾತೆ ಹಾಗೂ ವಾಟ್ಸಫ್‌ ಮೂಲಕ ಫೋಟೋವನ್ನು ಹರಿ ಬಿಟ್ಟಿರುತ್ತಾರೆ.ಇವರು ಹಲವಾರು ಬಾರಿ ಇದೇ ರೀತಿ ಜೈನ ಧರ್ಮ ಹಾಗೂ ಜೈನ ಧರ್ಮಿಯಯರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಗೂ ಪೋಸ್ಟ್ ಗಳನ್ನು ಹಾಕಿ ಅಹಿಂಸಾ ಪ್ರಿಯರಾದ ಜೈನ ಧರ್ಮಿಯರ ಮನಸ್ಸಿಗೆ ಘಾಸಿ ಉಂಟು ಮಾಡಿರುತ್ತಾರೆ, ಇದರಿಂದ ಜೈನ ಧರ್ಮಿಯರ ಮನಸ್ಸಿಗೆ ನೋವು ಉಂಟಾಗಿರುವುದು ಮಾತ್ರವಲ್ಲ, ಸನಾತನ ವಿಶ್ವ ಧರ್ಮವಾದ ಜೈನ ಧರ್ಮದ ಗೌರವಕ್ಕೆ ಧಕ್ಕೆ ಉಂಟಾಗಿರುತ್ತದೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಾರಾವಿ ಸಂತ ಪೌಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕ ಗೋಕುಲದಾಸ್, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya

ರಾಜ್ಯದ ವಿವಿಧ ನಿಗಮ, ಮಂಡಳಿಗಳಿಗೆ ನಿರ್ದೇಶಕರುಗಳ ಆಯ್ಕೆ: ರಾಜ್ಯ ಮಟ್ಟದ ಸಮಿತಿಯ ಸದಸ್ಯರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya
error: Content is protected !!