23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.23ರಂದು ಕ್ರಿಸ್ಮಸ್ ಹಬ್ಬವನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಸೇಕ್ರೆಡ್ ಹಾರ್ಟ್ ಕೆಳಅಂತಸ್ತಿನ ಸಭಾಭವನದಲ್ಲಿ ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳು ಹಾಡು ನೃತ್ಯ ನಾಟಕದ ಮೂಲಕ ಕ್ರಿಸ್ಮಸ್ ಹಬ್ಬದ ಮಹತ್ವವನ್ನು ಪ್ರದರ್ಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ವಹಿಸಿ ಮಾತನಾಡಿ ನಾವು ನಮ್ಮ ಜೀವನದಲ್ಲಿ ಎಲ್ಲವನ್ನೂ ಪ್ರೀತಿಸುವ, ಗೌರವಿಸುವ ಗುಣವನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿ, ಮಕ್ಕಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗರ್ಡಾಡಿ ಚರ್ಚ್ ನ ಧರ್ಮ ಗುರುಗಳಾದ ವಂ|ಸ್ವಾ| ಆರ್ಥರ್ ಪ್ರಶಾಂತ್ ಮೀನೇಜಸ್ ಮಾತನಾಡಿ ಕ್ರಿಸ್ಮಸ್ ಹಬ್ಬ ನಮಗೆಲ್ಲರಿಗೂ ಶಾಂತಿ ಸಮಾಧಾನವನ್ನು ತರಲಿ ಎಂದು ಹೇಳಿ, ಮಕ್ಕಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯವನ್ನು ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ| ಸ್ವಾ | ದೀಪಕ್ ಲಿಯೊ ಡೇಸರವರು, ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಚೇತನರವರು, ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೂರಜ್ ಚಾಲ್ಸ್ ನ್ಯೂನಸ್ ರವರು, ಗಾಡಿಯನ್ ಏಂಜಲ್ಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿಯಾದ ಶ್ರೀಮತಿ ಹೆಲೆನ್ ಮೋನಿಕರವರು, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಶಿಕ್ಷಕ- ಶಿಕ್ಷಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಗ್ಲೆನ್ಸನ್ ಮತ್ತು ಸನ ನಿರೂಪಿಸಿ, ನಿಧಿಶ್ ಶೆಟ್ಟಿರವರು ಸ್ವಾಗತಿಸಿ, ಮಹಮ್ಮದ್ ಅನೀಕ್ ಧನ್ಯವಾದವಿತ್ತರು.

Related posts

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya
error: Content is protected !!