26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

ಉಜಿರೆ : ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಡಿ. 24ರಂದು ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಿಸಲಾಯಿತು. ಸಂಜೆ ನಡೆದ ದಿವ್ಯ ಬಲಿ ಪೂಜೆಯಲ್ಲಿ ಏಸು ಕ್ರಿಸ್ತರು ಹುಟ್ಟಿದ ಗಾಯನಗಳು ಹಾಡಿ ಏಸು ಕ್ರಿಸ್ತರ ಜನದ ಸಂಭ್ರಮ ಪ್ರಾರಂಭ ವಾಯಿತು.

ದಿವ್ಯ ಬಲಿ ಪೂಜೆ ಮಂಗಳೂರಿನ ಜೆಪ್ಪು ಸೆಮಿನಾರಿಯ ಧರ್ಮ ಗುರು ವಂ. ಫಾ. ಐವನ್ ಡಿಸೋಜಾ ಪ್ರಧಾನ ದಿವ್ಯ ಬಲಿ ಪೂಜೆ ಅರ್ಪಿಸಿ ಪ್ರವಚನ ನೀಡಿದರು. ನಾವೆಲ್ಲರೂ ಸಹೋದರತೆಯಿಂದ ಬಾಳಿ ಪರರಿಗೂ ಪ್ರೀತಿ ವಿಶ್ವಾಸ ದಿಂದ ನೆಲೆಸಬೇಕು. ನಾವು ನೀಡಿದ ಧಾನ ಧರ್ಮ ಗುಪ್ತವಾಗಿರಬೇಕೇ ಹೊರತು ಹತ್ತಾರು ಜನರಿಗೆ ಪ್ರಚಾರ ಪಡಿಸುವದಲ್ಲ ಮತ್ತು ಸಹಾಯ ಮಾಡಿದವರಿಂದ ಯಾರು ಪ್ರತಿಫಲ ನಿರೀಕ್ಸಿಸಬಾರದು ಆವಾಗ ಮಾತ್ರ ಕ್ರಿಸ್ತ ಜನ್ಮ ದಿನ ಆಚರಣೆ ಸಾರ್ಥಕವಾಗುತ್ತದೆ ಎಂದರು. ಚರ್ಚ್ ಪ್ರಧಾನ ಧರ್ಮ ಗುರು ವಂ. ಅಬೆಲ್ ಲೋಬೊ, ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೊ ದಿವ್ಯ ಬಲಿ ಪೂಜೆಯಲ್ಲಿ ಭಾಗವಿಸಿದ್ದರು. ಭಕ್ತಾದಿಗಳೆಲ್ಲರೂ ಏಸು ಸ್ವಾಮಿಯ ಮೂರ್ತಿಗೆ ಭಕ್ತಿಯಿಂದ ನಮಿಸಿದರು. ದಾನಿ ಗಳಿಗೆ ಮೇಣದ ಬತ್ತಿ ವಿತರಿಸಲಾಹಿತು. ಐ ಸಿ ವೈ ಎಂ ಸಂಘದಿಂದ ಕೇಕ್ ಡ್ರಾ, ಸಾಂತಾಕ್ಲಾಸ್, ಸುಡು ಮದ್ದು ಪ್ರದರ್ಶನ ನಡೆಯಿತು.

ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಪಾಲನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದು ಸರ್ವ ರೀತಿಯಲ್ಲಿ ಸಹಕರಿಸಿದರು.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರೀದಮಿಕ್ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ: ಸಂಗೀತ ಗಾನ ಸಂಭ್ರಮ,ಮಹಾ ರಂಗಪೂಜೆ, ದೇವರ ಉತ್ಸವ

Suddi Udaya

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya
error: Content is protected !!