30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

ಉಜಿರೆ : ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಡಿ. 24ರಂದು ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಿಸಲಾಯಿತು. ಸಂಜೆ ನಡೆದ ದಿವ್ಯ ಬಲಿ ಪೂಜೆಯಲ್ಲಿ ಏಸು ಕ್ರಿಸ್ತರು ಹುಟ್ಟಿದ ಗಾಯನಗಳು ಹಾಡಿ ಏಸು ಕ್ರಿಸ್ತರ ಜನದ ಸಂಭ್ರಮ ಪ್ರಾರಂಭ ವಾಯಿತು.

ದಿವ್ಯ ಬಲಿ ಪೂಜೆ ಮಂಗಳೂರಿನ ಜೆಪ್ಪು ಸೆಮಿನಾರಿಯ ಧರ್ಮ ಗುರು ವಂ. ಫಾ. ಐವನ್ ಡಿಸೋಜಾ ಪ್ರಧಾನ ದಿವ್ಯ ಬಲಿ ಪೂಜೆ ಅರ್ಪಿಸಿ ಪ್ರವಚನ ನೀಡಿದರು. ನಾವೆಲ್ಲರೂ ಸಹೋದರತೆಯಿಂದ ಬಾಳಿ ಪರರಿಗೂ ಪ್ರೀತಿ ವಿಶ್ವಾಸ ದಿಂದ ನೆಲೆಸಬೇಕು. ನಾವು ನೀಡಿದ ಧಾನ ಧರ್ಮ ಗುಪ್ತವಾಗಿರಬೇಕೇ ಹೊರತು ಹತ್ತಾರು ಜನರಿಗೆ ಪ್ರಚಾರ ಪಡಿಸುವದಲ್ಲ ಮತ್ತು ಸಹಾಯ ಮಾಡಿದವರಿಂದ ಯಾರು ಪ್ರತಿಫಲ ನಿರೀಕ್ಸಿಸಬಾರದು ಆವಾಗ ಮಾತ್ರ ಕ್ರಿಸ್ತ ಜನ್ಮ ದಿನ ಆಚರಣೆ ಸಾರ್ಥಕವಾಗುತ್ತದೆ ಎಂದರು. ಚರ್ಚ್ ಪ್ರಧಾನ ಧರ್ಮ ಗುರು ವಂ. ಅಬೆಲ್ ಲೋಬೊ, ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೊ ದಿವ್ಯ ಬಲಿ ಪೂಜೆಯಲ್ಲಿ ಭಾಗವಿಸಿದ್ದರು. ಭಕ್ತಾದಿಗಳೆಲ್ಲರೂ ಏಸು ಸ್ವಾಮಿಯ ಮೂರ್ತಿಗೆ ಭಕ್ತಿಯಿಂದ ನಮಿಸಿದರು. ದಾನಿ ಗಳಿಗೆ ಮೇಣದ ಬತ್ತಿ ವಿತರಿಸಲಾಹಿತು. ಐ ಸಿ ವೈ ಎಂ ಸಂಘದಿಂದ ಕೇಕ್ ಡ್ರಾ, ಸಾಂತಾಕ್ಲಾಸ್, ಸುಡು ಮದ್ದು ಪ್ರದರ್ಶನ ನಡೆಯಿತು.

ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಪಾಲನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದು ಸರ್ವ ರೀತಿಯಲ್ಲಿ ಸಹಕರಿಸಿದರು.

Related posts

ಮೊಗ್ರು: ಗುಡ್ಡ ಜರಿದು ಮನೆಗೆ ಹಾನಿ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಧರ್ಮಸ್ಥಳ: ಕಾಲೇಜು ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya
error: Content is protected !!